ತೀರ್ಥಹಳ್ಳಿ

ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಧರ್ಮ ರಕ್ಷಣಾ ಯಾತ್ರೆ: ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

ತೀರ್ಥಹಳ್ಳಿ : ಧರ್ಮದ ರಕ್ಷಣೆಯ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಸಲುವಾಗಿ ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಭವ್ಯ ‘ಧರ್ಮ ರಕ್ಷಣಾ ಯಾತ್ರೆ’ ಹೊರಟಿದೆ. ಈ ಯಾತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರು ನೇತೃತ್ವ ವಹಿಸಲಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇಂದು ಬೆಳಿಗ್ಗೆ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವಾಲಯದಿಂದ ಯಾತ್ರೆ ಆರಂಭವಾಗಿದೆ .ಖಾಸಗಿ ಕಾರುಗಳು ಹಾಗೂ ಅನೇಕ ವಾಹನಗಳಲ್ಲಿ ಭಕ್ತಾದಿಗಳು ಧರ್ಮಸ್ಥಳದತ್ತ ಪ್ರಯಾಣ ಬೆಳೆಸಲಿದ್ದಾರೆ. ಯಾತ್ರಿಕರು ಮೊದಲು ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅದಾದ ಬಳಿಕ ಧರ್ಮಾಧಿಕಾರಿಗಳಿಗೆ “ನಾವು ಎಲ್ಲರೂ ನಿಮ್ಮ ಜೊತೆಗೆ ಇದ್ದೇವೆ” ಎಂಬ ದೃಢ ಅಭಯ ಸಂದೇಶ ನೀಡಲಾಗುತ್ತದೆ. ಸಂಜೆ ವೇಳೆಗೆ ಯಾತ್ರಿಕರು ತೀರ್ಥಹಳ್ಳಿಗೆ ವಾಪಾಸಾಗಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650