Ripponpete

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು ಕೆಲವರು ಇತ್ತೀಚೆಗೆ ರೂಢಿಸಿಕೊಂಡಿರುತ್ತಾರೆ.
ಸರ್ಕಾರವೇ ಈಗಾಗಲೇ ಅನೇಕ ಬಾರಿ ತನ್ನ ತನಿಖಾ ಸಂಸ್ಥೆಗಳ ಮೂಲಕ ವಿಚಾರಣೆ ಮಾಡಿದೆ. ಮತ್ತೆ ಈಗ ಅನಾಮಿಕನ ಮಾತಿಗೆ ಬೆಲೆಕೊಟ್ಟು ಎಸ್.ಐ.ಟಿ. ರಚನೆ ಮಾಡಿ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬರುವ ಮುಂಚೆಯೇ ಸ್ವಯಂ ಘೋಷಣೆ ಮಾಡುವ ಮೂಲಕ ಕೆಲವು ಸಾಮಾಜಿಕ ಜಾಲ ತಾಣಗಳ ಸಂಘಟಕರು, ಇನ್ನಿತರರು ಹತಾಶರಾಗಿ ಧರ್ಮ ಮತ್ತು ಧರ್ಮಾತ್ಮರ ನಿಂದೆ ಮಾಡುತ್ತಾ ಭಕ್ತ ಜನರ ಮನಸ್ಸಿಗೆ ಘಾಸಿ ಮಾಡಿ ಅಸಹಜ ಸಂತೋಷಪಡುತ್ತಿದ್ದಾರೆ.

ನಾವುಗಳು ತಪ್ಪಿತಸ್ಥರ ಪರವಾಗಿ ಇಲ್ಲ. ಕಾನೂನಿನ ಮತ್ತು ಸತ್ಯವಂತರ, ಧರ್ಮಾತ್ಮರ ಪರವಾಗಿ ಸಜ್ಜನರ ಜೊತೆಯಿದ್ದೇವೆ. ‘ಸತ್ಯಮೇವ ಜಯತೆ’, ‘ಧರ್ಮೋ ರಕ್ಷತಿ ರಕ್ಷಿತಃ’ ಸೂತ್ರಗಳನ್ನು ನಂಬಿರುವ ಭಕ್ತ ಜನರಿಗೆ ಸ್ವಧರ್ಮ, ಸ್ವದೇಶ ರಕ್ಷಣೆ ಮಾಡುವುದು ಗೊತ್ತಿದೆ. ಕಾನೂನಿಗೆ ತಲೆಬಾಗಿ ತಾಳ್ಮೆಯಿಂದಿರುವ ಜನರ ಪರೀಕ್ಷೆ ಸಲ್ಲದು.

ಸರ್ಕಾರ ಮತ್ತು ಕಾನೂನು ಇಲಾಖೆಯವರು ಪರಸ್ಪರ ನಿಂದನೆ ಮತ್ತು ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿರುವ ಜನಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>