ಶಿವಮೊಗ್ಗ ಸುದ್ದಿ

ನಾಳೆ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ‘ಧರ್ಮ ರಕ್ಷಾ ಜಾಥಾ’

ಶಿವಮೊಗ್ಗ : ಜಿಲ್ಲೆಯಿಂದ ಧರ್ಮಸ್ಥಳದತ್ತ ಸಾಗಲಿರುವ ಧರ್ಮ ರಕ್ಷಾ ಜಾಥಾಗೆ ಭಾರಿ ಸಿದ್ಧತೆಗಳು ನಡೆದಿದ್ದು, 150 ಕ್ಕೂ ಹೆಚ್ಚು ವಾಹನಗಳಲ್ಲಿ ಸುಮಾರು 700 ರಿಂದ 800 ಮಂದಿ ಭಕ್ತರು ಹಾಗೂ ರಾಷ್ಟ್ರಪ್ರೇಮಿಗಳು ನಾಳೆ (ಸೆ.2) ಧರ್ಮಸ್ಥಳಕ್ಕೆ ತೆರಳಲಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ಜಾಥಾಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತ ಬಳಗದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವ ವಹಿಸಿಕೊಂಡಿದ್ದು, ಯುವ ನಾಯಕ ಕೆ.ಇ. ಕಾಂತೇಶ್ ಮುಂದಾಳತ್ವದಲ್ಲಿ ಜಾಥಾ ಸಾಗಲಿದೆ. ಬೆಳಗ್ಗೆ 8 ಗಂಟೆಗೆ ಈಶ್ವರಪ್ಪ ಅವರ ಮನೆಯಲ್ಲಿ ಬೆಣ್ಣೆದೋಸೆ ಉಪಾಹಾರದ ನಂತರ ಜಾಥಾ ಹೊರಡುವ ನಿರೀಕ್ಷೆ ಇದೆ.

ಜಾಥಾ ಮಾರ್ಗ: ಶಿವಮೊಗ್ಗದಿಂದ ಕಡೂರು – ಬೀರೂರು – ಚಿಕ್ಕಮಗಳೂರು ಮಾರ್ಗವಾಗಿ ಮೂಡಿಗೆರೆಯಲ್ಲಿ ಅಲ್ಪ ವಿರಾಮ ಪಡೆದು, ಲಘು ಉಪಹಾರ ಸೇವಿಸಿ ಮಧ್ಯಾಹ್ನ 1:30 ರ ಹೊತ್ತಿಗೆ ಧರ್ಮಸ್ಥಳ ತಲುಪಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಧರ್ಮಸ್ಥಳ ತಲುಪಿದ ನಂತರ ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ತುಂಗಾ, ಗಂಗಾ ಹಾಗೂ ನೇತ್ರಾವತಿ ನದಿಯ ತೀರ್ಥ ಸೇವೆ ಮಾಡುವರು. ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿ, “ಧರ್ಮಕ್ಕೆ ಕಳಂಕ ತರುತ್ತಿರುವವರ ವಿರುದ್ಧದ ಹೋರಾಟದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದು ಘೋಷಿಸಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಂಜೆಯ ವೇಳೆಗೆ ಜಾಥಾ ವಾಪಸ್ ಆಗಲಿದ್ದು, “ಧರ್ಮ ರಕ್ಷಣೆಯ ಹೋರಾಟದಲ್ಲಿ ಜನರಿಂದ ಭಾರಿ ಬೆಂಬಲ ದೊರೆತಿದೆ” ಎಂದು ಪ್ರಮುಖ ವಿಶ್ವಾಸ್ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ನಾಳೆಯ ಜಾಥಾದ ಮೂಲಕ ಶಿವಮೊಗ್ಗದಿಂದ ಧರ್ಮಸ್ಥಳದತ್ತ ಅಪಾರ ವಾಹನಗಳ ದಂಡು ಹಾಗೂ ಭಕ್ತರ ಸಮೂಹ ಸಾಗುವ ಮೂಲಕ ಧರ್ಮರಕ್ಷಣೆಗಾಗಿ ಒಂದು ಬಲಿಷ್ಠ ಸಂದೇಶ ನೀಡಲಾಗುತ್ತಿದೆ.

ಅಗಸರಕೊಪ್ಪ ಕಸ ವಿಲೇವಾರಿ ಘಟಕದ ಬಳಿ ಗ್ರಾಮಸ್ಥರಿಂದ ಪ್ರತಿಭಟನೆ ; ಕಾರಣವೇನು ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650