HOSANAGARA ; ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ಇವರು ನಡೆಸಿದ ಕರ್ನಾಟಕ ಶಾಸ್ತ್ರಿಯ ಸಂಗೀತ ಪರೀಕ್ಷೆಯಲ್ಲಿ ಹೊಸನಗರದ ರಾಗ ಲಹರಿ ಸಂಗೀತ ಶಾಲೆಯ ವಿದ್ಯಾರ್ಥಿಗಳಾದ ತೇಜಸ್ವಿ ಮತ್ತು ಪಿ.ಜೆ ವೈಷ್ಣವಿ ರಾವ್ರವರು ಡಿಸ್ಟಿಂಕ್ಷನ್ ಪಡೆದು ಉತ್ತೀರ್ಣರಾಗಿದ್ದಾರೆ.
ಇದೇ ಸಂಗೀತ ಶಾಲೆಯ ವಿದ್ಯಾರ್ಥಿಗಳಾದ ದಶಮಿ ಪ್ರಥಮ ಶೇಣಿಯಲ್ಲಿ ಹಾಗೂ ಸೌರವ್ ಉತ್ತಮ ಶೇಣಿಯಲ್ಲಿ ಉತ್ತೀರ್ಣರಾಗಿದ್ದು ಇವರನ್ನು ರಾಗ ಲಹರಿ ಸಂಗೀತ ಗುರುಗಳಾದ ಅನುಪಮ ಸುರೇಶ ಹಾಗು ಹೊಸನಗರದ ಶಾಸ್ತ್ರಿಯ ಸಂಗೀತ ಪ್ರಿಯರು ಇವರನ್ನು ಅಭಿನಂದಿಸಿರುತ್ತಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.