ಮಗು ಮಾರಾಟ ಮಾಡಿದ್ದ ವೈದ್ಯ ಡಾ. ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ !

Written by malnadtimes.com

Published on:

ಬೆಂಗಳೂರು ; ನವಜಾತ ಶಿಶುವನ್ನು ಬೇರೆಯವರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್‌.ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವ ನಿರ್ಣಯವನ್ನು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

WhatsApp Group Join Now
Telegram Group Join Now
Instagram Group Join Now

ಏನಿದು ಪ್ರಕರಣ ?

ಡಾ. ಜಿ.ಎಸ್.ಬಾಲಕೃಷ್ಣ, ಪ್ರಸೂತಿ ತಜ್ಞರು, ಸಾರ್ವಜನಿಕ ಆಸ್ಪತ್ರೆ ಕೊಪ್ಪ, ಚಿಕ್ಕಮಗಳೂರು ಜಿಲ್ಲೆ ಇವರು ಕು. ಕಲ್ಪನಾ ಎಂಬ ಗರ್ಭಿಣಿಗೆ 2020ರ ಮಾ.14 ರಂದು ಹೆರಿಗೆ ಮಾಡಿಸಿ, ಅವರಿಗೆ ಜನಿಸಿದ ಹೆಣ್ಣು ಮಗುವನ್ನು 50 ಸಾವಿರ ರೂ.ಗಳಿಗೆ ಪ್ರೇಮಲತಾ ಎಂಬುವವರಿಗೆ ಮಾರಾಟ ಮಾಡಿ, ಪ್ರೇಮಲತಾ ಎಂಬುವವರಿಗೆ ಹೆರಿಗೆಯಾದಂತೆ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿರುವ ಆರೋಪಕ್ಕಾಗಿ ಇವರ ವಿರುದ್ಧ ನಡೆಸಲಾದ ಇಲಾಖಾ ವಿಚಾರಣೆಯಲ್ಲಿ ದುರ್ನಡತೆಯ ಆರೋಪವು ಸಾಬೀತಾಗಿರುವುದರಿಂದ, ಇವರನ್ನು ಕೆಸಿಎಸ್ (ಸಿಸಿಎ) ನಿಯಮಗಳು 1957ರ ನಿಯಮ 8(vi) ರಡಿಯಲ್ಲಿ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ದಂಡನೆಯನ್ನು ವಿಧಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ವಿವರಿಸಿದರು.

Leave a Comment