ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ; ಪಿಎಸ್ಐ ವಿರುದ್ಧ ಪತ್ನಿ ದೂರು !

Written by Mahesh Hindlemane

Published on:

ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಅಮಿತಾ ನಿತ್ಯಾನಂದ ಗೌಡ ಜ.17ರಂದು ರಾತ್ರಿ ಕಳಸ ಠಾಣೆಗೆ ನೀಡಿರುವ ದೂರಿನಲ್ಲಿ ತನ್ನ ಪತಿ ನಿತ್ಯಾನಂದ ಗೌಡ ಜ.17ರಂದು ತಾವಿರುವ ಪೊಲೀಸ್ ಕ್ವಾಟರ್ಸ್ ಗೆ ತನ್ನನ್ನು ಕರೆಸಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. 50 ಲಕ್ಷ ರೂ. ವರದಕ್ಷಿಣೆ ನೀಡಬೇಕು, ಇಲ್ಲವಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ನಿತ್ಯಾನಂದ ಗೌಡರ ತಂಗಿ ಮೇನಕಾ ಗಂಡ ಚಂದ್ರಕಾಂತ್ ಕೊಠಾರಿ ಕೂಡಾ ದಬಾಯಿಸಿ, ಹಲ್ಲೆಗೆ ಮುಂದಾಗಿದ್ದಾನೆ ಎಂದು ಅಮಿತಾ ದೂರಿದ್ದಾರೆ.

ಈ ಬಗ್ಗೆ ಕಳಸ ಪಿಎಸ್ಐ ನಿತ್ಯಾನಂದ ಗೌಡ, ಅವರ ತಂಗಿ ಮೇನಕಾ, ಬಾವ ಚಂದ್ರಕಾಂತ್ ಕೊಠಾರಿ ಹಾಗೂ ತಾಯಿ ಪ್ರೇಮಾ ಕುಮಾರ್ ಗೌಡ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment