E Khata:ಬೆಂಗಳೂರು ನಗರದಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವು ಪ್ರಮುಖ ಬದಲಾವಣೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈಗಾಗಲೇ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವಾಗ ಇ-ಖಾತೆ ಅನ್ನು ಕಡ್ಡಾಯವಾಗಿ ಬಳಸುವುದು ಅಗತ್ಯವಾಗಿದೆ. ಇತ್ತೀಚೆಗೆ, ಬಿಬಿಎಂಪಿ ಪ್ರತ್ಯೇಕವಾಗಿ ವಿವಿಧ ಆಸ್ತಿಗಳಿಗೆ ಇ-ಖಾತೆ ಅನ್ನು ಕಡ್ಡಾಯ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಮಹತ್ವದ ಪ್ರಕಟಣೆಯನ್ನು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೊರಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ನಲ್ಲಿ ಪಡೆಯುವ ವ್ಯವಸ್ಥೆ ಈಗಾಗಲೇ ಲಭ್ಯವಾಗಿದ್ದು, ಪಾಲಿಕೆಯ ಕಂದಾಯ ವಿಭಾಗವು ಇ-ಆಸ್ತಿ ತಂತ್ರಾಂಶವನ್ನು ಕಾರ್ಯಗತಗೊಳಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಈ ರೀತಿಯ ಸ್ವತ್ತುಗಳ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಪಡೆಯಬಹುದಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಪಾಲಿಕೆಯ ನಗರ ಯೋಜನಾ ವಿಭಾಗವು ನೀಡುವ ನಕ್ಷೆ ಮಂಜೂರಾತಿಯನ್ನು ಇಒಡಿಬಿ-ಒಬಿಪಿಎಸ್ ಆನ್ಲೈನ್ ತಂತ್ರಾಂಶದ ಮೂಲಕ ಮತ್ತು ಪಾಲಿಕೆಯ ಕಂದಾಯ ವಿಭಾಗದ ಇ-ಖಾತಾ ನೀಡುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿವೇಶನ ಅಥವಾ ಸ್ವತ್ತಿನ ಕಂದಾಯ ದಾಖಲೆಗಳನ್ನು ಪರಿಶೀಲಿಸಲು ಬಳಸುವ ತಂತ್ರಾಂಶವು 01-07-2025ರಿಂದ ಸ್ವತ್ತಿನ ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ನಮೂದಿಸಲು ಹಾಗೂ ಇ-ಖಾತಾ ಸಲ್ಲಿಸಲು ಅಗತ್ಯವಿರುತ್ತದೆ. ಇದರಿಂದ, ಪಾಲಿಕೆಯ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲೆಗಳನ್ನು ಪರಿಶೀಲಿಸಲು ಸಲ್ಲಿಸುವ ಪ್ರಕ್ರಿಯೆ ಹೊರತಾಗುವುದರಿಂದ, ಪಾಲಿಕೆಯು ನೀಡುವ ಸೇವೆಗಳನ್ನು ಸುಲಭಗೊಳಿಸಲು ಮತ್ತು ಸಮಯದಲ್ಲಿ ನಕ್ಷೆ ಮಂಜೂರಾತಿ ನೀಡಲು ಸಹಾಯವಾಗಲಿದೆ.
Read More
ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ
ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.