ಹೊಸನಗರ ; ವಾರಸುದಾರರ ಹಕ್ಕು ಬದಲಾವಣೆಯಾಗದಿರುವ ಪಹಣಿಗಳ ಇ-ಪೌತಿ ಅಭಿಯಾನವನ್ನು ಹೊಸನಗರ ತಾಲ್ಲೂಕಿನಾದ್ಯಂತ ಕಳೆದೊಂದು ವಾರದಿಂದ ಆರಂಭಿಸಿರುವುದಾಗಿ ತಹಸೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು.
ಅವರು ತಾಲ್ಲೂಕು ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದಂತೆ ಮರಣ ಹೊಂದಿದ ಖಾತೆದಾರರ ಹೆಸರನ್ನು ತೆಗೆದು ಅದರ ಕಾನೂನು ಬದ್ದ ವಾರಸುದಾರರಿಗೆ ಹೆಸರನ್ನು ಸೇರಿಸಲು ಅವಕಾಶ ಕಲ್ಪಿಸಲಾಗಿದ್ದು ರೈತರು ಇದರ ಅನುಕೂಲವನ್ನು ಪಡೆದುಕೊಳ್ಳಬೇಕೆಂದರು.
ಇ-ಪೌತಿ ಮಾಡಿಸಲು ಮೃತರ ಖಾತೆದಾರರ ಮರಣ ಪ್ರಮಾಣಪತ್ರ, ಕುಟುಂಬದ ವಂಶವೃಕ್ಷ, ಆಧಾರ್ ಕಾರ್ಡ್, ಪಹಣಿಯೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
ಸರಿಪಡಿಸಿಕೊಳ್ಳದ ಪಹಣಿ ಮೇಲೆ ಬೆಳೆವಿಮೆ, ಪಿ.ಎಂ ಕಿಸಾನ್ ಯೋಜನೆ, ಬೀಜ-ಗೊಬ್ಬರ, ಮತ್ತು ಇತ್ಯಾದಿ ಸರ್ಕಾರದ ಸೌಲಭ್ಯಗಳು ದೊರಕುವುದಿಲ್ಲ ಇದರ ಜೊತೆಯಲ್ಲಿ ಬ್ಯಾಂಕ್ ಹಾಗೂ ಸೊಸೈಟಿಯಲ್ಲೂ ಸಾಲ ದೊರೆಯುವುದಿಲ್ಲ ಎಂದು ಹೇಳಿದ್ದು ಹೊಸನಗರ ತಾಲ್ಲೂಕಿನ ಎಲ್ಲಾ ಇ-ಪೌತಿ ಖಾತೆದಾರರು ತಕ್ಷಣ ನಿಮಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಈ ಮುಲಕ ಕೇಳಿಕೊಂಡರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಕಟ್ಟೆ ಮಂಜುನಾಥ್, ಸುಧೀಂದ್ರ ಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರಾಘವೇಂದ್ರ, ಗ್ರಾಮ ಆಡಳಿತಾಧಿಕಾರಿ ಲೋಹಿತ್, ರೇಣುಕಯ್ಯ, ನವೀನ್, ಸಿದ್ದಪ್ಪ, ಬಸವರಾಜ್
ಮತ್ತಿತರರು ಇದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.