ಶಿವಮೊಗ್ಗ

ಟ್ರಂಚ್‌ಗೆ ಬಿದ್ದು ಕಾಡಾನೆ ಸಾವು !

SHIVAMOGGA ; ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆನೆಗಳ ಉಪಟಳ ತಡೆಯಲು ತೆಗೆಯಲಾಗಿದ್ದ ಟ್ರಂಚ್‌ಗೆ ಎರಡು ದಿನದ ಹಿಂದೆಯೇ ಕಾಡಾನೆ ಬಿದ್ದಿದೆ ಎನ್ನಲಾಗಿದ್ದು, ಮೇಲೆ ಬರಲಾಗದೇ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಆನೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆನೆಯ ಕಳೆಬರಹದ ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇನ್ನು ಶಿವಮೊಗ್ಗ ಗ್ರಾಮಾಂತರ ಭಾಗದ ಸಿರಿಗೆರೆ, ಆಯನೂರು, ಆಲದೇವರ ಹೊಸೂರು, ಪುರದಾಳು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿತ್ತು. ಈ ಆನೆಗಳನ್ನು ಇಲ್ಲಿಂದ ಓಡಿಸಬೇಕು ಅಥವಾ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಹಾಗಾಗಿ ಸೆಕ್ರೆಬೈಲು ಬಿಡಾರದಿಂದ ಮೂರು ಆನೆಗಳನ್ನು ತಂದು ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ನಡುವೆಯೇ ಆನೆಯೊಂದು ಮೃತಪಟ್ಟಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]