RIPPONPETE ; ಸನಾತನ ಸಂಸ್ಕೃತಿ ಸಂಸ್ಕಾರವನ್ನು ಇಂದಿನ ಯುವ ಪೀಳಿಗಗೆ ತಿಳಿಸುವ ಕೆಲಸವನ್ನು ಪೋಷಕವರ್ಗ ಮಾಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುವ ಮೂಲಕ ಅವರಲ್ಲಿನ ಕಲಿಕೆಗನುಗುಣವಾಗಿ ಪ್ರೋತ್ಸಾಹಿಸಿ ಎಂದು ಪ್ರಸಿದ್ಧ ಭಾಗವತ, ಯಕ್ಷ ಧ್ರುವ ಪಟ್ಲ ಸತೀಶ್ ಹೇಳಿದರು.
ರಿಪ್ಪನ್ಪೇಟೆಯ ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳಿಗೆ ಯಕ್ಷಗಾನ ರಂಗ ತರಬೇತಿ ನೀಡಿ ಅವರನ್ನು ಧರ್ಮ ಜಾಗೃತಗೊಳಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯವೆಂದ ಅವರು, ಶಾಲಾ ಹಂತದಲ್ಲಿ ಯಕ್ಷಗಾನದ ಕಲೆಯನ್ನು ವಿದ್ಯಾರ್ಥಿಗಳು ಮೈಗೊಡಿಸಿಕೊಳ್ಳುವಂತೆ ನಮ್ಮ ಸಂಸ್ಥೆ ಸ್ವಂತ ಖರ್ಚಿನಲ್ಲಿ ತಾಲ್ಲೂಕಿನ ಹಲವು ಶಾಲೆಗಳಿಗೆ ಹೋಗಿ ಉಚಿತ ತರಬೇತಿ ನೀಡಲಾಗಿದೆ ಎಂದರು.
ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಪಿ.ಸುಧೀರ್, ಎನ್.ಸತೀಶ್, ಪದ್ಮಸುರೇಶ್, ರೇಖಾ ರವಿ, ನಾಗರತ್ನ ದೇವರಾಜ್, ಗೀತಾ, ಸೀತಾ, ಗೀತಾ ಅಣ್ಣಪ್ಪ, ಲೀಲಾಶಂಕರ್, ಆಶ್ವಿನಿ ಸತೀಶ್, ಉಮಾ ಸುರೇಶ್, ಲಕ್ಷ್ಮಿ ಶ್ರೀನಿವಾಸ, ಸಂದೀಪ ಶೆಟ್ಟಿ, ದೀಪಾ ಸುಧೀರ್, ಆಚಾರ್, ಹಿರಿಯಣ್ಣ ಭಂಡಾರಿ, ಕಲಾವತಿ ಚಂದ್ರಪ್ಪ, ಆಶಾ ಬಸವರಾಜ, ದಿವಾಕರ, ರಾಘವೇಂದ್ರ, ಪ್ರವೀಣ್ ಆಚಾರ್, ಶೈಲಾ ಆರ್.ಪ್ರಭು, ರಾಘು ಆರ್ಟ್ಸ್ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.
ರಿಪ್ಪನ್ಪೇಟೆಯಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ
ರಿಪ್ಪನ್ಪೇಟೆ ; ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದವರ 31ನೇ ವರ್ಷದ ವಾರ್ಷೀಕೋತ್ಸವ ಮತ್ತು 69ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ
ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು.

ಹಿರಿಯ ವಾಲಿಬಾಲ್ ಆಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ ಇವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ ಎಸೆಯುವ ಮೂಲಕ ಚಾಲನೆ ನೀಡಿದರು.
ಟಿ.ಆರ್.ಕೃಷ್ಣಪ್ಪ, ಪದ್ಮಾ ಸುರೇಶ್, ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿ ಪಿ.ಸುದೀರ್, ಎಂ.ಸುರೇಶಸಿಂಗ್,ದೇವರಾಜ್ ಕುಷನ್, ದಿವಾಕರ ಕೆದಲುಗುಡ್ಡೆ, ಮುರುಳಿಧರ, ಲೀಲಾಶಂಕರ್, ಶೈಲಾ ಆರ್.ಪ್ರಭು, ಗೀತಾ ಅಣ್ಣಪ್ಪ, ರೇಖಾರವಿ, ಅಶ್ವಿನಿ, ನಾಗರತ್ನ ದೇವರಾಜ್, ಉಮಾ ಸುರೇಶ್, ದೀಪಾ ಸುಧೀರ್, ಸೀತಾ, ಗೀತಾ, ಇನ್ನಿತರರು ಹಾಜರಿದ್ದರು.
ನಿಧನವಾರ್ತೆ :
ರಿಪ್ಪನ್ಪೇಟೆ : ಸಮೀಪದ ಬಾಳೂರು ರೈತ ಪರಮೇಶ (50) ಶಿವಮೊಗ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.
ಮೃತರು ಪತ್ನಿ, ಮಕ್ಕಳು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ರಿಪ್ಪನ್ಪೇಟೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಸೈಕಲ್ ಸ್ಪರ್ಧೆ
RIPPONPETE ; ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದವರ 31ನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ತಾಲ್ಲೂಕು ಮಟ್ಟದ ಸೈಕಲ್ ಸ್ಪರ್ಧೆಗೆ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಕನ್ನಡ ಬಾವುಟ ಎತ್ತಿ ಹಿಡಿಯುವ ಮೂಲಕ ಚಾಲನೆ ನೀಡಿದರು.

ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿ ಪಿ.ಸುಧೀರ್, ಎಂ.ಸುರೇಶಸಿಂಗ್, ದೇವರಾಜ್ ಕುಷನ್, ದಿವಾಕರ, ಹಿರಿಯಣ್ಣ. ಭಂಡಾರಿ, ಶ್ರೀನಿವಾಸ ಆಚಾರ್, ಸಂಘದ ಪದಾಧಿಕಾರಿಗಳು ಹಾಜರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?