ರಿಪ್ಪನ್ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಆಗಸ್ಟ್ 17 ರಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರ್ಷದಲ್ಲಿ ಎರಡು ಬಾರಿ ನಾಗರ ಪಂಚಮಿಯಂದು ಜರುಗಲಿರುವ ಈ ಜಾತ್ರಾ ಮಹೋತ್ಸವ ಇಲ್ಲಿನ ವಿಶೇಷವಾಗಿದೆ. ಅಂದು ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ, ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಲಿದ್ದು ಸಕಲ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆಯುವಂತೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.