ಅಪರಾಧ ಸುದ್ದಿ

ಚಿನ್ನದ ನಾಣ್ಯ ಕೊಡುತ್ತೇವೆಂದು ನಂಬಿಸಿ ₹2 ಲಕ್ಷ ವಂಚನೆ – ಮಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಮೋಸ

crime news

ಶಿವಮೊಗ್ಗ: ಚಿನ್ನದ ನಾಣ್ಯ ನೀಡುತ್ತೇವೆ ಎಂಬ ನಂಬಿಕೆಯ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬರು ₹2 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಚೂಡಯ್ಯ ಆಚಾರ್ಯ (67) ಎಂಬ ಮಂಗಳೂರಿನ ವ್ಯಕ್ತಿಗೆ ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿ,“ನೆಲದಲ್ಲಿ ಚಿನ್ನದ ನಾಣ್ಯ ಸಿಕ್ಕಿವೆ, ಅವು ಮಾರಾಟಕ್ಕೆ ಇವೆ” ಎಂದು ನಂಬಿಸಿದ್ದಾನೆ.ಇದನ್ನ ನಂಬಿದ ಆಚಾರ್ಯ, ವಂಚಕರ ಸೂಚನೆಯಂತೆ ಜುಲೈ 30, 2025 ರಂದು ಬೆಳಗ್ಗೆ 6:30 ಗಂಟೆಗೆ ಶಿವಮೊಗ್ಗದ ಹೊರವಲಯ ಈಶ್ವರ ವನದ ಬಳಿ ಹೋಗಿದ್ದಾರೆ.

ವಂಚಕನು ತನ್ನೊಂದಿಗೆ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದು, ಚೀಲವೊಂದರಲ್ಲಿ ನಾಣ್ಯವಿಟ್ಟು, ಆಚಾರ್ಯರಿಂದ ₹2 ಲಕ್ಷ ಪಡೆದುಕೊಂಡಿದ್ದಾನೆ.ಅದಾದ ನಂತರ:ಇನ್ನೊಬ್ಬ ಬೈಕ್‌ ನವನು ಸ್ಥಳಕ್ಕೆ ಬಂದು ಬ್ಯಾಗ್ ಚೆಕ್ ಮಾಡಬೇಕೆಂದು ಬೆದರಿಕೆ ನೀಡಿದ್ದಾನೆ ಬಳಿಕ ವಂಚಕರು ಎಲ್ಲರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಎಲ್ಲ ಮಾಹಿತಿ ಚೂಡಯ್ಯ ಆಚಾರ್ಯ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಿಖೆ ಪ್ರಗತಿಯಲ್ಲಿದೆ:

ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿ, ವಂಚಕರ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ, ಕರೆ ದಾಖಲಾತಿ ಸೇರಿದಂತೆ ತಾಂತ್ರಿಕ ಆಧಾರಗಳನ್ನೂ ಬಳಸಲಾಗುತ್ತಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಾರ್ವಜನಿಕರಿಗೆ ಎಚ್ಚರಿಕೆ:

ಈ ರೀತಿಯ ವಂಚನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ:

“ಅನಾಮಧೇಯ ವ್ಯಕ್ತಿಗಳ ಕರೆಗಳ ಮೇಲೆ ನಂಬಿಕೆ ಇಡುವದನ್ನು ತಪ್ಪಿಸಿ. ಚಿನ್ನ, ಹಣ, ಆಸ್ತಿ ಸಂಬಂಧಿತ ವ್ಯವಹಾರಗಳನ್ನು ನೇರವಾಗಿ ನಿರ್ವಹಿಸದಿರಿ.”

ಜೋಗ್ ಫಾಲ್ಸ್‌ನ ಅಪಾಯದ ಪ್ರದೇಶದಲ್ಲಿ ವೀಡಿಯೋ ಮಾಡಿದ ಯೂಟ್ಯೂಬರ್‌ ವಿರುದ್ಧ ಎಫ್‌ಐಆರ್

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650