Hosanagara

ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ‌ಮೃತ ರೈತ. ಹುಚ್ಚನಾಯ್ಕ ತಮ್ಮ ಹಸುಗಳಿಗೆ ತಿನ್ನಲು ಹುಲ್ಲನ್ನು ತರಲು ಗದ್ದೆಗೆ ತೆರಳಿದ್ದು, ಹುಲ್ಲು ಕೊಯ್ಯುವ ವೇಳೆ ಹಾವು ಕಾಲಿಗೆ ಕಚ್ಚಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>