Chikmagaluru News

ಜಾನುವಾರು ಕಟ್ಟಲು ಹೋದ ರೈತ ನೀರುಪಾಲು !

MUDIGERE | ಜಾನುವಾರು ಕಟ್ಟಲು ಹೋದ ರೈತನೋರ್ವ ಆಕಸ್ಮಿಕವಾಗಿ ಜಾರಿಬಿದ್ದು ಹೊಳೆ ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

📢 Stay Updated! Join our WhatsApp Channel Now →

ಬೈದುವಳ್ಳಿ ಗ್ರಾಮದ ಕೃಷಿಕ ಬಿ.ಎಲ್. ಗೋಪಾಲಗೌಡ (63) ಮೃತ ರೈತ. ಈತ ಜಾನುವಾರು ಕಟ್ಟಲು ಹೋದಾಗ ತುಂಬಿ ಹರಿಯುತ್ತಿದ್ದ ಹೇಮಾವತಿ ಉಪನದಿಗೆ ಜಾರಿ ಬಿದ್ದಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ಮೇಲೇಳಲಾಗದೆ ಹೊಳೆಯ ಹರಿವಿಗೆ ಸಿಲುಕಿ ಸಾವನ್ನಪ್ಪಿದ್ದಾನೆ‌ ಎನ್ನಲಾಗಿದೆ.

ಆನೆ ದಾಳಿ, ಮೃತ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಅವಿವಾಹಿತರಾಗಿದ್ದ ಗೋಪಾಲ್ ಗೌಡ ಕೃಷಿಕರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಗೋಣಿಬೀಡು ಪೊಲೀಸರು, ಅಗ್ನಿಶಾಮಕ ದಳ, ಮುಳುಗು ತಜ್ಞರು ಆಗಮಿಸಿ ಶವಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>