N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು ಎಂಬಲ್ಲಿ ಗುರುವಾರ ನಡೆದಿದೆ.
ಮಡಬೂರು ಗ್ರಾಮದ ಕೃಷಿಕ ಕೆ.ಕೆ.ಏಲಿಯಾಸ್ (72) ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮೇಯಲು ಕಾಡಿಗೆ ತೆರಳಿದ್ದ ಎಮ್ಮೆ ಬಾರದ ಹಿನ್ನೆಲೆಯಲ್ಲಿ ತಂದೆ ಮತ್ತು ಮಗ ಎಮ್ಮೆ ಹುಡುಕಿಕೊಂಡು ಕಾಡಿಗೆ ತೆರಳಿದ್ದರು. ಈ ವೇಳೆ ಆನೆ ಎದುರುಗೊಂಡಿದ್ದು ಆನೆಯನ್ನು ಕಂಡ ಮಗ ಸ್ಥಳದಿಂದ ಓಡಿ ಬಂದಿದ್ದಾನೆ. ಆದರೆ ತಂದೆ ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನ.30 ರಂದು ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್ ಗ್ರಾಮಕ್ಕೆ ನುಗ್ಗಿದ್ದ ಆನೆಯನ್ನು ಓಡಿಸಲು ಮುಂದಾದಾಗ ಆನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದರು. ಈ ಘಟನೆ ನಡೆದು 20 ದಿನ ಕಳೆದಿದ್ದು ಘಟನೆ ಮಾಸುವ ಮುನ್ನವೇ ಮಡಬೂರು ಗ್ರಾಮದ ಕೆ.ಕೆ.ಏಲಿಯಾಸ್ ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಮಲೆನಾಡು ಭಾಗದಲ್ಲಿ ಆನೆಗಳ ದಾಳಿಗೆ ಕಡಿವಾಣ ಹಾಕುವಂತೆ ಇಲ್ಲಿನ ಜನರು ಆಗ್ರಹಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.