ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರೈತರ ಮನವಿ

Written by Mahesh Hindlemane

Published on:

ರಿಪ್ಪನ್‌ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ. ಅಲ್ಲದೆ, ವಿದೇಶಿ ಅಡಿಕೆ ಆಮದಿನಿಂದಾಗಿ ನಮ್ಮ ಮಲೆನಾಡಿನ ಅಡಿಕೆ ಬೆಲೆ ಕಡಿಮೆಯಾಗುವಂತಾಗಿದ್ದು ರೈತ ಸಮೂಹ ಹೈರಾಣಾಗಿದ್ದಾರೆ. ಈ ಎಲ್ಲ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸಿ ಬೆಳೆಗಾರರ ಹಿತ ಕಾಯುವಂತೆ ಆಗ್ರಹಿಸಿ ಜನವರಿ 18 ರಂದು ಸಾಗರ ಸಂತೆ ಮೈದಾನದಲ್ಲಿ ಏರ್ಪಡಿಸಲಾಗಿರುವ ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರ ತಾಲ್ಲೂಕಿನ ಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ರೈತರಿಗೆ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆ ರಾಮಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈಗಾಗಲೇ ಮಲೆನಾಡಿನ ವ್ಯಾಪ್ತಿಯಲ್ಲಿ ಆನೆಗಳ ಹಾವಳಿಯಿಂದ ರೈತರು ಕೆಂಗೆಟ್ಟು ಹೋಗಿದ್ದು ಅದನ್ನು ತಡೆಗಟ್ಟುವಂತೆ ಆಬರಣ್ಯ ಇಲಾಖೆ ಗಮನ ಸೆಳೆಯಲಾಗಿದೆ ಹಾಗೂ ಸೊಪ್ಪಿನ ಬೆಟ್ಟದಲ್ಲಿ ಮತ್ತು ಅಕ್ರಮ ಒತ್ತವರಿ ಜಮೀನು ಮಾಡಿಕೊಂಡು ಕೃಷಿ ಮಾಡಲಾಗಿರುವ ರೈತರ ಸಮಸ್ಯೆ ಹೀಗೆ ಹತ್ತು ಹಲವು ರೈತ ಅಡಿಕೆ ಬೆಳೆಗಾರರ ಸಮಸ್ಯೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಸೆಳೆಯುವ ಮೂಲಕ ಶಾಶ್ವತ ಪರಿಹಾರ ಒದಗಿಸುವ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ಚೌವ್ಹಾಣ್ ಮತ್ತು ರಾಜ್ಯ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಇವರ ಮೂಲಕ ಸರ್ಕಾರಕ್ಕೆ ಅಡಿಕೆ ಬೆಳೆಗಾರ ರೈತ ಸಮೂಹ ಪಕ್ಷಾತೀತವಾಗಿ ಬೆಂಬಲಿಸಿ ಮನವಿ ಸಲ್ಲಿಸುವುದಾಗಿ ವಿವರಿಸಿದರು.

ಜನವರಿ 18 ರಂದು ಸಾಗರದ ಸಂತೆ ಮೈದಾನದಲ್ಲಿ ಸಾಗರ-ಸೊರಬ-ಹೊಸನಗರ ತಾಲ್ಲೂಕಿನ ಅಡಿಕೆ ಪರಿಷ್ಕರಣ ಮತ್ತು ಮರಾಟ ಸಹಕಾರ ಸಂಘ ಮತ್ತು ತೋಟಗರ‍್ಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಎಪಿಎಂಸಿ ಪ್ರಾಂಗಣ ಸಾಗರ ಸುವರ್ಣ ಮಹೋತ್ಸವ ವರ್ಷ ಏರ್ಪಡಿಸಲಾಗಿರುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶವನ್ನು ಕೇಂದ್ರ ಕೃಷಿ ರೈತ ಕಲ್ಯಾಣ ಸಚಿವರು ಶಿವರಾಜ್‌ಸಿಂಗ್ ಚೌವ್ಹಾಣ್ ಉದ್ಘಾಟಿಸುವರು. ರಾಜ್ಯ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಮರಣಿಕೆ ಬಿಡುಗಡೆ ಮಾಡುವರು.

ಸಂಸದ ಬಿ.ವೈ.ರಾಘವೇಂದ್ರ ವಸ್ತುಪ್ರದರ್ಶನವನ್ನು ಉದ್ಘಾಟಿಸುವರು, ರಾಜ್ಯ ಶಿಕ್ಷಣ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗೌರವಸಮರ್ಪಣೆ ಜರುಗಲಿದ್ದು ಈ ಸಮಾವೇಶದ ಅಧ್ಯಕ್ಷತೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ವಹಿಸುವರು.

ಈ ಸಮಾವೇಶದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಸಮಿತಿ ಗೌರವಾಧ್ಯಕ್ಷ ಹೆಚ್.ಎಸ್.ಮಂಜಪ್ಪ, ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರ ಸಂಘದ ಅಧ್ಯಕ್ಷ ವ.ಶಂ ರಾಮಚಂದ್ರಭಟ್ ಹಾಗೂ ಜಿಲ್ಲೆಯ ರಾಜಕೀಯ ಮುಖಂಡರು ಸಹಕಾರಿ ಸಂಘದ ಅಧ್ಯಕ್ಷರುಗಳು ಲೋಕಸಭಾ ಸದಸ್ಯರು ಭಾಗವಹಿಸುವರು. ಇದೇ ಸಮಾವೇಶದಲ್ಲಿ ಹಿರಿಯರು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಅಡಿಕೆ ಬೆಳೆಗಾರ ಸಂಘದ ಸಹ ಸಂಚಾಲಕ ಹಕ್ರೆ ಮಲ್ಲಿಕಾರ್ಜುನ, ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎನ್.ಸತೀಶ್, ಮುಖಂಡರಾದ ಆರ್.ಟಿ.ಗೋಪಾಲ, ಸುಧೀಂದ್ರ ಪೂಜಾರಿ, ಎಂ.ಸುರೇಶ್‌ಸಿಂಗ್, ನಾಗಾರ್ಜುನಸ್ವಾಮಿ, ಮಂಜುಳಾ ಕೇತಾರ್ಜಿರಾವ್, ಯೋಗೇಂದ್ರಗೌಡ, ದೀಪಾ, ಪಿ.ರಮೇಶ್, ಸುಧೀರ್, ಮುರುಳಿಧರ ಕೆರೆಹಳ್ಳಿ ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment