ಶಿವಮೊಗ್ಗ

Shivamogga | ಹೆಚ್ಚಿದ ಅಡಿಕೆ ಕಳ್ಳತನ, ಆತಂಕದಲ್ಲಿ ರೈತರು

SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ ಅಡಿಕೆ ಮನೆಯಿಂದ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ಬಹಳಷ್ಟು ಕಡೆ ಅಡಿಕೆ ಕಳ್ಳತನ ನಡೆಯುತ್ತಿದ್ದು, ಅಡಿಕೆ ಬೆಳೆಗಾರರು ಆರೋಪಿಗಳ ಪತ್ತೆಗೆ ಹಾಗೂ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹಾಡೋನಹಳ್ಳಿ ಜಗದೀಶ್ ಆಗ್ರಹ
ಇಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಭಾಗದ ಅಡಿಕೆ ಕಳ್ಳತನಕ್ಕೆ ಸೂಕ್ತ ಬ್ರೇಕ್ ಹಾಕುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಹಾಡೋನಳ್ಳಿ ಜಗದೀಶ್ ಒತ್ತಾಯಿಸಿದ್ದಾರೆ.

ಈ ಭಾಗದ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಡಿಕೆ ಕಳತನವನ್ನು ತಪ್ಪಿಸಲು ಸರ್ಕಾರ ಪ್ರತಿ ಗ್ರಾಮಗಳ ಮುಖ್ಯ ರಸ್ತೆಗಳಿಗೆ ಕನಿಷ್ಠ ಒಂದೆರಡು ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಅವರು ಒತ್ತಾಯಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]