Shivamogga

Shivamogga | ಹೆಚ್ಚಿದ ಅಡಿಕೆ ಕಳ್ಳತನ, ಆತಂಕದಲ್ಲಿ ರೈತರು

SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ ಅಡಿಕೆ ಮನೆಯಿಂದ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ಬಹಳಷ್ಟು ಕಡೆ ಅಡಿಕೆ ಕಳ್ಳತನ ನಡೆಯುತ್ತಿದ್ದು, ಅಡಿಕೆ ಬೆಳೆಗಾರರು ಆರೋಪಿಗಳ ಪತ್ತೆಗೆ ಹಾಗೂ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಹಾಡೋನಹಳ್ಳಿ ಜಗದೀಶ್ ಆಗ್ರಹ
ಇಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಭಾಗದ ಅಡಿಕೆ ಕಳ್ಳತನಕ್ಕೆ ಸೂಕ್ತ ಬ್ರೇಕ್ ಹಾಕುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಹಾಡೋನಳ್ಳಿ ಜಗದೀಶ್ ಒತ್ತಾಯಿಸಿದ್ದಾರೆ.

ಈ ಭಾಗದ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಡಿಕೆ ಕಳತನವನ್ನು ತಪ್ಪಿಸಲು ಸರ್ಕಾರ ಪ್ರತಿ ಗ್ರಾಮಗಳ ಮುಖ್ಯ ರಸ್ತೆಗಳಿಗೆ ಕನಿಷ್ಠ ಒಂದೆರಡು ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಅವರು ಒತ್ತಾಯಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>