ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ ; ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಧರಣಿ ಕುಳಿತ್ತಿದ್ದು ತಹಸೀಲ್ದಾರ್‌ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವವರೆಗೆ ಧರಣಿ ಹಿಂಪಡೆಯುವುದಿಲ್ಲ ಎಂದು ಧರಣಿ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಸವೆ ಗ್ರಾಮದಲ್ಲಿ ಸುಮಾರು 25 ವರ್ಷಗಳಿಂದ ಕಂದಾಯ ಭೂಮಿಯಲ್ಲಿ ಅನಧಿಕೃತ ಸಾಗುವಳಿಯನ್ನು ತೆರವುಗೊಳಿಸುವ ನೆಪದಲ್ಲಿ ತಹಸೀಲ್ದಾರ್ ಕಾನೂನು ಮೀರಿದ್ದಾರೆ. ಮಾನವೀಯತೆಯನ್ನೂ ಮರೆತು ನಿಯಮಬಾಹಿರವಾಗಿ ತೆರವು ಕಾರ‍್ಯ ಕೈಗೊಂಡಿದ್ದಾರೆ. ಫಸಲು ಬರುವ ಹಂತದಲ್ಲಿದ್ದ 1600 ಅಡಿಕೆ ಮರಗಳನ್ನು ಜೆಸಿಬಿ ಯಂತ್ರ ಬಳಸಿ ನಾಶಪಡಿಸಿದ್ದಾರೆ. ತೋಟದಲ್ಲಿದ್ದ ಮನೆಯನ್ನು ನೆಲಸಮ ಮಾಡಿದ್ದಾರೆ. ಕೃಷಿಕರು ಸುಮಾರು 7 ವರ್ಷಗಳ ಹಿಂದೆ ಅಡಿಕೆ ಗಿಡಗಳನ್ನು ನೆಟ್ಟಿದ್ದರು. 5 ಎಕರೆ ಜಾಗದಲ್ಲಿ ಕೈಗೊಂಡಿದ್ದ ಕೃಷಿ ಭೂಮಿಯನ್ನು ಸಕ್ರಮೀಕರಣಗೊಳಿಸಲು ಬಗರ್‌ಹಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು.

ಫಾರಂ 53 ಹಾಗೂ ಫಾರಂ 57 ರಲ್ಲಿ ಅರ್ಜಿಗಳು ಇತ್ಯರ್ಥಗೊಳ್ಳುವ ಮುನ್ನವೇ ಏಕಾಏಕಿ ಅಡಿಕೆ ತೋಟ ಸೇರಿದಂತೆ ಕೃಷಿಭೂಮಿಯನ್ನು ನಾಶಮಾಡಲಾಗಿದೆ. ಇದನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕೃಷಿಕ ಶ್ರೀಧರ ಅವರಿಗೆ ದಿಕ್ಕಿಲ್ಲದಂತಾಗಿದೆ. ಕನಿಷ್ಟ ರೈತರಿಗೆ ಒಂದು ನೋಟಿಸ್ ಸಹಾ ಜಾರಿಗೊಳಿಸದೇ ಕ್ರಮ ಕೈಗೊಂಡಿರುವುದು ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ತಹಸೀಲ್ದಾರ್‌ ಬಗರ್ ಹುಕುಂ ಅರ್ಜಿಯನ್ನು ವಜಾ ಮಾಡಿದ್ದು ನಂತರ ಉಪ ವಿಬಾಗಾಧಿಕಾರಿಗಳು ಬಗರ್‌ಹುಕುಂ ಅರ್ಜಿಯನ್ನು ವಜಾ ಮಾಡಿದ್ದಾರೆ. ಆದರೇ ರೈತ ಶ್ರೀಧರ್‌ ಅರ್ಜಿ ವಜಾ ಮಾಡಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿಗಳ ನ್ಯಾಯಲಯಕ್ಕೆ ದೂರು ಸಲ್ಲಿಸಲಾಗಿದ್ದು ಜಿಲ್ಲಾಧಿಕಾರಿಗಳ ಆದೇಶ ಬರುವ ಮುಂಚೆಯೇ ಅಡಿಕೆ ಮರಗಳನ್ನು ಕಡಿದು ಹಾಕಿದ್ದು ತಹಸೀಲ್ದಾರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ರೈತ ಶ್ರೀಧರ್‌ರಿಗೆ ನಷ್ಟ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ವೇಳೆ ಕೃಷಿಕ ಶ್ರೀಧರ ಸೇರಿದಂತೆ ರೈತ ಸಂಘಟನೆಗಳ ಪ್ರಮುಖರಾದ ಸಾಗರದ ತಿ.ನಾ. ಶ್ರೀನಿವಾಸ್, ಮಾಸ್ತಿಕಟ್ಟೆ ರವೀಂದ್ರ, ರಿಪ್ಪನ್‌ಪೇಟೆ ಸಮಾಜೀಕ ಹೋರಾಟಗಾರ ಕೃಷ್ಣಪ್ಪ, ಜಯರಾಮ ಶೆಟ್ಟಿ, ಮಂದಾರ ವಿಠ್ಠಲ, ಮಂದಾರ ಗಿರೀಶ್ ಮತ್ತಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>