ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

Written by Mahesha Hindlemane

Published on:

ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ ಹೊಸನಗರ ತಾಲ್ಲೂಕು ಕಂದಾಯ ಇಲಾಖೆಯ ಎದುರು 3 ದಿನದಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸಾಗರದ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್‌ ಮಧ್ಯಸ್ಥಿಕೆಯಲ್ಲಿ ಅಂತ್ಯಗೊಂಡಿದೆ.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭದಲ್ಲಿ ಮಾತನಾಡಿದ ಸಾಗರದ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾನು ಇಲ್ಲಿಗೆ ಆಗಮಿಸಿದ್ದು ಇದರ ಸಂಪೂರ್ಣ ತನಿಖೆ ನಡೆಸಲು ಆದೇಶಿಸಲಾಹಿದೆ‌. ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ತೋಟಗಾರಿಕೆ ಇಲಾಖೆಯ ಸಹಕಾರದಲ್ಲಿ ಅಲ್ಪ ಅವಧಿಯಲ್ಲಿ ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ತೀ.ನಾ. ಶ್ರೀನಿವಾಸ್, ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಮಾಸ್ತಿಕಟ್ಟೆ ರವೀಂದ್ರ, ಜಯರಾಮ ಶೆಟ್ಟಿ, ಮಂದಾರ ವಿಠಲ, ಮಂದಾರ ಗಿರೀಶ್, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

Leave a Comment