ರೈತರೇ ಗಮನಿಸಿ, ಈ ದಿನಾಂಕದೊಳಗೆ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಆಧಾರ್ ಲಿಂಕ್ ಮಾಡೋದು ಕಡ್ಡಾಯ, ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತೆ ಗೊತ್ತಾ ?

Written by Mahesh Hindlemane

Published on:

HOSANAGARA | ಹೊಸನಗರ ಉಪವಿಭಾಗದ ವ್ಯಾಪ್ತಿಯ ಎಲ್ಲಾ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಸರ್ಕಾರದ ಸಬ್ಸಿಡಿ ಸೌಲಭ್ಯ ಪಡೆಯುವ ಸಲುವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕಾಗಿರುವುದು ಕಡ್ಡಾಯವಾಗಿದೆ.

WhatsApp Group Join Now
Telegram Group Join Now
Instagram Group Join Now

ಗ್ರಾಹಕರು ಮೆಸ್ಕಾಂ ಉಪವಿಭಾಗ ಕಛೇರಿ ಹೊಸನಗರ, ರಿಪ್ಪನ್‌ಪೇಟೆ ಶಾಖಾ ಕಛೇರಿ ಹಾಗೂ ನಗರ ಶಾಖಾ ಕಛೇರಿಗಳಿಗೆ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಧಾರ್ ಲಿಂಕ್ ಇರುವ ಮೊಬೈಲ್ ನೊಂದಿಗೆ ಜು.13 ರೊಳಗೆ ಖುದ್ದು ಹಾಜರಾಗಿ ಆಧಾರ್ ಲಿಂಕ್ ಮಾಡಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ಹೊಸನಗರ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment