ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !

Written by Mahesha Hindlemane

Published on:

ಶಿವಮೊಗ್ಗ ; ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಈ ಘಟನೆ ನಡೆದಿದೆ.

ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ (50), ಸಾದಿಕ್ (30) ಮತ್ತು ಫಿರೋಜ್ (22) ಮೃತ ದುರ್ದೈವಿಗಳು‌.

ಮೃತರ ಪೈಕಿ ಅಸಾದುಲ್ಲಾ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದವರಾಗಿದ್ದು, ಸಾದಿಕ್ ಮತ್ತು ಫಿರೋಜ್ ಉತ್ತರ ಪ್ರದೇಶದ ಕಾರ್ಮಿಕರು ಎಂದು ತಿಳಿದು ಬಂದಿದೆ.

ಚಾಲಕ ಇರ್ಫಾನ್ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕೆಲಸ ಮುಗಿಸಿ ವಾಪಸ್ ಶಿವಮೊಗ್ಗಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ನಿದ್ದೆ ಮಂಪರಿನಲ್ಲಿ ಚಾಲಕ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗಿದ್ದು ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment