ಸೂಡೂರು ಗೇಟ್ ಬಳಿ ಭೀಕರ ಅಪಘಾತ ; ಮೂವರು ಯುವಕರ ಸ್ಥಿತಿ ಗಂಭೀರ !

Written by Mahesha Hindlemane

Updated on:

RIPPONPETE ; ಹೊಸನಗರ – ಆಯನೂರು ನಡುವಿನ ಸೂಡೂರು ಗೇಟ್ ಬಳಿಯ ಸೂಡೂರು ಭೂತರಾಯನ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮಾರುತಿ ಆಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ.

ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಬಳಿಯ ಕೆಂಚನಾಲ, ತಳಲೆ ಮತ್ತು ಕಳಸೆ ಮೂಲದವರು ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಮೂವರು ಅಮೃತ (ಗರ್ತಿಕೆರೆ) ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಂದು ಕಾಲೇಜಿಗೆ ರಜೆ ಇದ್ದ ಕಾರಣ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ ಊರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

108 ಆಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದರು ಆಂಬುಲೆನ್ಸ್ ಬಾರದೇ ಗಾಯಾಳುಗಳು ಒದ್ದಾಡುತ್ತಿರುವ ದೃಶ್ಯ ಮನಕಲುಕುವಂತಿದೆ.

ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Comment