Ripponpete

ಸೂಡೂರು ಗೇಟ್ ಬಳಿ ಭೀಕರ ಅಪಘಾತ ; ಮೂವರು ಯುವಕರ ಸ್ಥಿತಿ ಗಂಭೀರ !

RIPPONPETE ; ಹೊಸನಗರ – ಆಯನೂರು ನಡುವಿನ ಸೂಡೂರು ಗೇಟ್ ಬಳಿಯ ಸೂಡೂರು ಭೂತರಾಯನ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಾರುತಿ ಆಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ.

ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಬಳಿಯ ಕೆಂಚನಾಲ, ತಳಲೆ ಮತ್ತು ಕಳಸೆ ಮೂಲದವರು ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಮೂವರು ಅಮೃತ (ಗರ್ತಿಕೆರೆ) ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಂದು ಕಾಲೇಜಿಗೆ ರಜೆ ಇದ್ದ ಕಾರಣ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ ಊರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

108 ಆಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದರು ಆಂಬುಲೆನ್ಸ್ ಬಾರದೇ ಗಾಯಾಳುಗಳು ಒದ್ದಾಡುತ್ತಿರುವ ದೃಶ್ಯ ಮನಕಲುಕುವಂತಿದೆ.

ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>