Chikmagaluru News

ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ, ಮದುವೆ ಮಂಟಪದಲ್ಲಿ ಮಗಳ ವಿವಾಹ ; ಕಾಫಿನಾಡಲೊಂದು ಹೃದಯವಿದ್ರಾವಕ ಘಟನೆ

ತರೀಕೆರೆ ; ತಂದೆಯ ಸಾವಾದರೂ ಮಗಳಿಗೆ ಈ ವಿಚಾರ ತಿಳಿಯದಂತೆ ಮುಚ್ಚಿಟ್ಟು ಸೂತಕದ ನಡುವೆಯೇ ಕುಟುಂಬಸ್ಥರು ಮದುವೆಯನ್ನು ನೆರವೇರಿಸಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರ ಪಟ್ಟಣದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೌದು, 45 ವರ್ಷದ ಚಂದ್ರು ಅವರು ತಮ್ಮ ಮಗಳ ಮದುವೆ ಹಿನ್ನೆಲೆ ಹಿಂದಿನ ದಿನ ಉತ್ಸಾಹದಿಂದ ಓಡಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಆಮಂತ್ರಣ ಪತ್ರಿಕೆಯನ್ನು ಕೊಡಲು ಹೋದಾಗ ಅಲ್ಲಿ ಭೀಕರ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಆದರೆ ತಂದೆ ಸಾವನ್ನಪ್ಪಿದ್ದಾರೆ ಎಂದು ಮಗಳು ತಿಳಿದರೆ, ಎಲ್ಲಿ ಮದುವೆಯನ್ನು ನಿಲ್ಲಿಸುತ್ತಾಳೊ ಎಂಬ ಭಯದಿಂದ ಕುಟುಂಬ್ಥರು ಈ ವಿಚಾರವನ್ನು ಮುಚ್ಚಿಟ್ಟು ಮದುವೆ ಮಾಡಿಸಿದ್ದಾರೆ. ಅಪ್ಪ ಎಲ್ಲಿ ಎಂದು ಕೇಳಿದರೆ, ಅವರಿಗೆ ಮದುವೆಗೆ ಓಡಾಡಿ ಸುಸ್ತಾಗಿದೆ, ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ವಿವಾಹವನ್ನು ನೆರವೇರಿಸಿದ್ದಾರೆ.

ಎಲ್ಲಾ ಮದುವೆ ಶಾಸ್ತ್ರ ಮುಗಿಯುವ ತನಕ ಆಸ್ಪತ್ರೆಯಲ್ಲೇ ಇಡಲಾಗಿದ್ದ ಚಂದ್ರು ಮೃತದೇಹವನ್ನು ಮನೆಗೆ ರವಾನಿಸಿ ಬಳಿಕ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ನವ ಜೋಡಿ ಹಾಗೂ ಸಂಬಂಧಿಕರು ಮದುವೆ ಮಂಟಪದಿಂದ ಮನೆಗೆ ಓಡೋಡಿ ಹೋಗಿದ್ದಾರೆ. ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>