ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ತಾಲೂಕಿನ ನಗರ ಸಮೀಪದ ಅರೋಡಿ ಬಳಿ ನಡೆದಿದೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ ಬಳಿಯಲ್ಲಿ ಭತ್ತ ತುಂಬಿದ್ದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಇಂದು ಸಂಜೆಯ ವೇಳೆ ಅರೋಡಿ ಸಮೀಪದ ಸೇತುವೆ ಮೇಲೆ ಲಾರಿಯೊಂದು ತಡೆಗೋಡೆಗೆ ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಲಾರಿಯನ್ನು ತೆರವುಗೊಳಿಸುವ ವೇಳೆ ಮತ್ತೊಂದು ಲಾರಿ ಅದೇ ಸ್ಥಳದಲ್ಲಿ ಬಂದು ನಿಂತಿತು. ನಿಂತ ಲಾರಿಯನ್ನು ಮುಂದೆ ಚಲಾಯಿಸುವ ವೇಳೆ ಈ ಅಪಘಾತವಾಗಿದೆ. ನೋಡನೋಡುತಿದ್ದಂತೆ ಎರಡು ಅಪಘಾತಗಳು ನಡೆದಿದ್ದು ಒಂದು ಲಾರಿಯನ್ನು ಮೇಲೆತ್ತುವ ವೇಳೆ ಮತ್ತೊಂದು ಲಾರಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ.
ಅರೋಡಿ ಸಮೀಪದ ಸೇತುವೆಯೊಂದಕ್ಕೆ ಲಾರಿಯೊಂದು ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಕ್ರೇನ್ ಸಹಾಯದಿಂದ ಲಾರಿಯನ್ನು ಎಳೆಯುತಿದ್ದಾಗ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಮತ್ತೊಂದು ಲಾರಿ ನಿಯಂತ್ರಣಕ್ಕೆ ಸಿಗದೇ ಕಂದಕಕ್ಕೆ ಉರುಳಿದೆ.
ಘಟನೆಯಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…