Categories: Featured-Article

ಕಾಂಗ್ರೆಸ್ ಮತ್ತು ವಿರೋಧಿ ಶಕ್ತಿಗಳನ್ನು ಸೋಲಿಸುವ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ; ಕೆಎಸ್ಈ

ಶಿವಮೊಗ್ಗ: ಕಾಂಗ್ರೆಸ್ ಮತ್ತು ವಿರೋಧಿ ಶಕ್ತಿಗಳನ್ನು ಸೋಲಿಸುವ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.


ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆ ಎಂಬುದು ಚಿಕ್ಕದಲ್ಲ. ಇದು ಕೇವಲ ಚುನಾವಣೆ ಅಲ್ಲ. ದೇಶ ಉಳಿಸುವ ಕಾಯಕ. ಕಾಂಗ್ರೆಸ್ ವಿರೋಧಿ ಶಕ್ತಿಗಳೆಲ್ಲಾ ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕೆಂಬ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಸೇರಿ ಚುನಾವಣೆ ಎದುರಿಸುತ್ತೇವೆ. ಈ ಬಾರಿಯೂ 28 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿಯಲಾಗುತ್ತದೆ ಎಂದ ಅವರು, ಕಳೆದ ಬಾರಿ ಕಾಂಗ್ರೆಸ್ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೂ ಸ್ಥಾನ ಪಡೆಯದಂತೆ ಕಾಂಗ್ರೆಸ್ ವಿರೋಧಿ ಮತಗಳನ್ನು ಕ್ರೋಡೀಕರಿಸಿ ಜಯಗಳಿಸಲಾಗುತ್ತದೆ ಎಂದರು.


ಕರ್ನಾಟಕವನ್ನು ಬರಪೀಡಿತ ರಾಜ್ಯವೆಂದು ಘೋಷಣೆ ಮಾಡುವಲ್ಲಿ ರಾಜ್ಯ ಸರ್ಕಾರ ನಾಳೆ ಬಾ ಎನ್ನುವ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಜಲಾಶಯಗಳಲ್ಲಿ ನೀರಿಲ್ಲ. ನಾಟಿ ಮಾಡಿರುವ ಬೆಳೆಯೂ ನೀರಿಲ್ಲದೆ ಒಣಗುತ್ತಿವೆ. ಆದರೂ ಬರ ಘೋಷಣೆ ಮಾಡದೆ ಕಾದು ನೋಡುವ ತಂತ್ರ ಅನುಸರಿಸಲಾಗುತ್ತದೆ. ಕೊನೆಯ ದಿನಗಳಲ್ಲಿ ಮಳೆ ಬಂದರೆ ಬರ ಘೋಷಣೆ ಮಾಡದೆ ಪರಿಹಾರ ನೀಡದೆ ಇರಬಹುದೆಂಬ ಮನಸ್ಥಿತಿಯಲ್ಲಿ ಸರ್ಕಾರವಿದೆ ಎಂದರು.


ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಪರಿಹಾರ ಕೊಡಿ ಎಂದರೆ ಆತ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೈಯಕ್ತಿಕ ನೋವಿನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಸ್ವತಃ ಸಚಿವರೇ ಹೇಳಿದ್ದಾರೆ. ಇದು ರೈತ ವಿರೋಧಿ ನೀತಿಯಾಗಿದೆ. ಈ ರೀತಿ ಹೇಳುವ ಸಚಿವರನ್ನು ರಾಜಕೀಯ ಜೀವನದಲ್ಲೇ ನೋಡಿಲ್ಲ ಎಂದರು.


ರಾಜ್ಯದಲ್ಲಿ ಬರ ಆವರಿಸಿದ್ದರೂ ಯಾವ ಜಿಲ್ಲೆಯ ಉಸ್ತುವಾರಿ ಸಚಿವರೂ ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ರೈತರ ಆಹವಾಲು ಆಲಿಸುತ್ತಿಲ್ಲ. ಲೋಕಸಭೆ ಚುನಾವಣೆಯಲ್ಲೂ ಗೆಲ್ಲುವುದಿಲ್ಲ. ಮುಂದೆ ವಿಧಾನ ಸಭೆ ಚುನಾವಣೆಯಲ್ಲೂ ಗೆಲ್ಲುವುದಿಲ್ಲ ಎಂಬ ಮನಸ್ಥಿತಿಯಲ್ಲಿ ಸಚಿವರು, ಶಾಸಕರಿದ್ದಾರೆ ಎಂದು ಟೀಕಿಸಿದರು.


ಸನಾತನ ಧರ್ಮವನ್ನು ಟೀಕಿಸುವವರಿಗೆ ಈ ಬಾರಿಯ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ. ಇಂಡಿಯಾ ಎಂಬುದು ವಿದೇಶಿ ಹೆಸರಾಗಿದೆ. ಆದರೆ ಯರ‍್ಯಾರು ಭಾರತ ಎಂದು ಹೆಮ್ಮೆ ಪಡುತ್ತಾರೋ ಅವರೆಲ್ಲ ದೇಶಪ್ರೇಮಿಗಳು ಎಂದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago