ಹೊಸನಗರ: ದೀಪಾವಳಿ (Deepavali) ದಿನ ಗೋಪೂಜೆ (Gopooje) ಸಲ್ಲಿಸುವ ಸಮಯದಲ್ಲಿ ಹಸುವೊಂದು (Cow) ಪೂಜೆಗಿಟ್ಟಿದ್ದ ಚಿನ್ನದ ಸರವನ್ನು (Gold Chain) ನುಂಗಿದ್ದ ಘಟನೆ ತಾಲೂಕಿನ ಮತ್ತಿಮನೆಯಲ್ಲಿ (Mattimane) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದೀಗ ಪಶುವೈದ್ಯರು ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆ ಚಿನ್ನದ ಸರವನ್ನು ಹೊರತೆಗೆದಿದ್ದಾರೆ. ಮತ್ತಿಮನೆ ಸತ್ಯವತಿ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಗೋಪೂಜೆಯ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬದವರು ದಿಗಿಲುಗೊಂಡಿದ್ದರು. ನಂತರ ಪರಿಶೀಲಿಸಿದಾಗ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಮನೆಯವರು ಖಚಿತ ಪಡಿಸಿಕೊಂಡಿದ್ದಾರೆ. ಬಂಗಾರ ಹೋದರೆ ಹೋಗಲಿ ಎಂದು ಸತ್ಯವತಿ ಶ್ಯಾಮ ಉಡುಪ ಸುಮ್ಮನಾಗಿದ್ದರು. ಆದರೆ ಹಲವರ ಬಳಿ ಈ ವಿಚಾರ ಹೇಳಿದಾಗ ಇದು ಹಸುವಿನ ಪ್ರಾಣಕ್ಕೂ ಕುತ್ತು ತರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಅವರ ಆತಂಕಕ್ಕೆ ಕಾರಣವಾಗಿತ್ತು.
ಅಲ್ಲದೇ ಚಿನ್ನದ ಸರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಹಸುವಿನ ಆರೋಗ್ಯದ ಸ್ಥಿತಿಯ ಬಗ್ಗೆ ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿ ಡಾ. ಆನಂದ್ ಜಿ ಅವರಿಗೆ ಮಾಹಿತಿ ನೀಡಿದ್ದರು. ವೈದ್ಯರು ಭಾನುವಾರ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರತೆಗೆದಿದ್ದಾರೆ. ಹಸು ಆರೋಗ್ಯವಾಗಿದ್ದು, ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.
ಡಾ. ಆನಂದ್ ಈ ಬಗ್ಗೆ ಮಾಹಿತಿ ನೀಡಿ, ಹಸು ಮೆಲುಕು ಹಾಕಿ ಮೇವು ಜಗಿಯುವಾಗ ಸರ ತುಂಡಾಗಿ ಚೂಪಾಗಿದ್ದು, ರೆಟಿಕ್ಯುಲಮ್ ಭಾಗದಲ್ಲಿ ಸಿಲುಕಿತ್ತು. ಚೂಪಾಗಿದ್ದರಿಂದ ಗಾಯವಾಗಿ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಯಶಸ್ವಿ ಚಿಕಿತ್ಸೆ ಮೂಲಕ ಸರವನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೈತ್ರಿ ಕಾರ್ಯಕರ್ತ ಗಣಪತಿ ಜಿ, ಪಶು ಇಲಾಖೆ ಸಿಬ್ಬಂದಿ ಹಾಜರಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…