Categories: Featured-Article

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲೇ ಒಳರೋಗಿ ಸಾವು !

ಶಿವಮೊಗ್ಗ: ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.

ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು ಮಂಜುನಾಥ್(32). ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ. ಮೇ 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆ ಪಡೆಯುತ್ತಿದ್ದ ಒಳ ರೋಗಿ ಅದ್ಯಾವಾಗ ಆಸ್ಪತ್ರೆಯಿಂದ ಹೊರಗೆ ಹೋದನೋ ಗೊತ್ತಿಲ್ಲ. ಯಾವುದೇ ಡಿಸ್ಜಾರ್ಜ್ ಪ್ರಕ್ರಿಯೆ ನಡೆಯದೆ, ಇನ್ನೂ ಚೇತರಿಸಿಕೊಳ್ಳದ ರೋಗಿಯು ಒಳರೋಗಿ ವಿಭಾಗದಿಂದ ಹೊರಗೆ ಬಂದಿದ್ದಾನೆ. ಆಸ್ಪತ್ರೆಯ ಸಿಬ್ಬಂದಿ ಈತನನ್ನು ಗಮನಿಸಿಲ್ಲ. ಇದರ ಪರಿಣಾಮ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹೌದು ಆತನ ಬ್ಯಾಗ್ ನಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ದಾಖಲೆ ಸೇರಿದಂತೆ ಇನ್ನಿತರ ದಾಖಲೆಗಳು ಪತ್ತೆಯಾಗಿವೆ. ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯು, ಕ್ಯಾಂಪಸ್‌ನಲ್ಲಿ ಕೊನೆಯುಸಿರು ಎಳೆದಿದ್ದಾನೆ. ಈ ಘಟನೆಯಿಂದ ಮೃತನ ಕುಟುಂಬಸ್ಥರು ಮತ್ತು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಹೀಗೆ ಒಳರೋಗಿ ಆಗಿದ್ದ ಮೃತನು ಹೊರಗೆ ಬಂದಿದ್ದು ಹೇಗೆ. ಬಂದ ಬಳಿಕ ಆತನ ಬಗ್ಗೆ ಯಾರು ಕೂಡಾ ನಿಗಾವಹಿಸಿಲ್ಲ. ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯು ಸೂಕ್ತ ಚಿಕಿತ್ಸೆ ಸಿಗದೇ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪ್ರಾಣ ಬಿಟ್ಟಿದ್ದಾನೆ. ಮೃತನ ಸಂಬಂಧಿಕರು ಘಟನೆ ಕುರಿತು ಮೆಗ್ಗಾನ್ ಜಿಲ್ಲಾಸ್ಪತ್ರೆಯ ಅಧಿಕಾರಿಗಳ ಮತ್ತು ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವಿರಕ್ಕೂ ಅಧಿಕ ಬೆಡ್ಗಳಿವೆ. ಜೊತೆಗೆ ಮೆಡಿಕಲ್ ಕಾಲೇಜ್ ಇರುವುದರಿಂದ ಇಲ್ಲಿನ ಮೆಡಿಕಲ್ ವಿದ್ಯಾರ್ಥಿಗಳು ಕೂಡ ಜಿಲ್ಲಾಸ್ಪತ್ರೆಯಲ್ಲಿ ಸೇವೆಯನ್ನು ಸಲ್ಲಿಸುತ್ತಾರೆ. ಇಷ್ಟೆಲ್ಲ ಸರಕಾರದಿಂದ ಕೋಟಿ ಕೋಟಿ ಹಣ ಪ್ರತಿ ತಿಂಗಳು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜ್‌ಗೆ ಹರಿದು ಬರುತ್ತದೆ. ಆದ್ರೂ, ಕೂಡ ಬಡ ರೋಗಿಗಳಿಗೆ ಸಿಗಬೇಕಾಗಿರುವ ಉತ್ತಮ ಚಿಕಿತ್ಸೆ ಮತ್ತು ಸೌಲಭ್ಯಗಳು ಸಿಗುವುದಿಲ್ಲ. ಇದರಿಂದ ಅನೇಕ ಬಡ ರೋಗಿಗಳು ಇಲ್ಲಿಯೇ ಪ್ರಾಣ ಬಿಡುತ್ತಾರೆ. ದೇವರು ವರ ಕೊಟ್ಟರು ಪೂಜಾರಿ ವರ ಕೊಡುವುದಿಲ್ಲ ಎನ್ನುವ ಗಾದೆಯಂತೆ ಸರ್ಕಾರ ಕೋಟಿ ಕೋಟಿ ಹಣ ಸರಕಾರಿ ಆಸ್ಪತ್ರೆಗೆ ವೆಚ್ಚ ಮಾಡಿದ್ರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಮೆಗ್ಗಾನ್ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಮತ್ತು ವೈದ್ಯರು, ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಒಳ ರೋಗಿಗಳು ಗಪ್ ಚುಪ್ ಆಗಿ ನಾಪತ್ತೆಯಾಗಿ ಬಿಡುತ್ತಾರೆ. ಈ ಹಿಂದೆ ಈ ರೀತಿ ಅನೇಕ ಒಳರೋಗಿ ನಾಪತ್ತೆ ಕೇಸ್​ಗಳಾಗಿವೆ. ಈ ನಡುವೆ ಮತ್ತೊಂದು ಘಟನೆಯು ಸದ್ಯ ಎಲ್ಲರನ್ನು ಬೆಚ್ಚಿಬಿಳಿಸಿದೆ. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿಯ ಅವ್ಯವಸ್ಥೆ ಸರಿಪಡಿಸಲು ಜಿಲ್ಲಾಡಳಿತವು ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೇ ಇರುವುದು ರೋಗಿಗಳಿಗೆ ದೊಡ್ಡ ಶಾಪವಾಗಿ ಕಾಡುತ್ತಿದೆ. ಹೊಸ ಸರಕಾರ ಅಧಿಕಾರಕ್ಕೆ ಬಂದಿದೆ. ಇನ್ನಾದರೂ ಬಡವರ ಪಾಲಿನ ಹೈಟೆಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆಗಳು ಬದಲಾಗುತ್ತವೆಯೇ ಎನ್ನುವ ನಿರೀಕ್ಷೆಯಲ್ಲಿ ಮಲೆನಾಡಿನ ಬಡರೋಗಿಗಳಿದ್ದಾರೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

14 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

15 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

15 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

18 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

20 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

21 hours ago