ಹೊಸನಗರ: ಪಟ್ಟಣದ ಚೌಡಮ್ಮ ರಸ್ತೆ ಪಕ್ಕದಲ್ಲಿದ್ದ ಮರ ಉರುಳಿ ಬಿದ್ದು ಹಾಪ್ಕಾಮ್ಸ್ ಮಳಿಗೆ ನೆಲಸಮವಾದ ಘಟನೆ ನಡೆದಿದೆ.
ಮರ ರಸ್ತೆ ಅಂಚಿನಲ್ಲಿದ್ದು, ಬೀಳುವ ಸಮಯದಲ್ಲಿ ಮರದಡಿಯಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ರಸ್ತೆಯಲ್ಲಿ ಸಹಾ ಸಂಚಾರವಿತ್ತು. ಮರಕ್ಕೆ ಹೊಂದಿಕೊಂಡಂತೆ ವಿದ್ಯುತ್ ಕಂಬ, ತಂತಿ ಇತ್ತು. ಇನ್ನೊಂದು ಭಾಗದಲ್ಲಿ ಕಳೂರು ಸಹಕಾರ ಸಂಘದ ಗೊಬ್ಬರದ ಗೋದಾಮು ಇತ್ತು. ಆದರೆ ಮರ ಇದ್ಯಾವುದರ ಮೇಲೂ ಬೀಳದೇ ಇನ್ನೊಂದು ಪಾರ್ಶ್ವದಲ್ಲಿದ್ದ ನೂತನ ಮಳಿಗೆ ಮೇಲೆ ಉರುಳಿತು. ನೂತನ ಮಳಿಗೆ ಇನ್ನೂ ಲೋಕಾರ್ಪಣೆಗೊಂಡಿರಲಿಲ್ಲ. ಹಾಗಾಗಿ ಮಳಿಗೆಯಲ್ಲಿ ಯಾರೂ ಇರಲಿಲ್ಲ.
ಮರ ಬೀಳುವ ಸಮಯದಲ್ಲಿ ವಿದ್ಯುತ್ ಕಂಬಕ್ಕೆ ಸ್ವಲ್ಪತಾಗಿದೆಯಾದರೂ, ತುಂಡಾಗಲಿಲ್ಲ. ಒಟ್ಟಿನಲ್ಲಿ ಹಲವು ರೀತಿಯಲ್ಲಿ ನಾಗರಿಕರಿಗೆ ಅಪಾಯ ಒಡ್ಡಬಹುದಹಾಗಿದ್ದ ಮರ ಧರಶಾಹಿಯಾಗಿದ್ದು ಅದೃಷ್ಟವಶಾತ್ ಹೆಚ್ಚಿನ ಸಮಸ್ಯೆ ಉಂಟಾಗಿಲ್ಲ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…