ಶಿಕಾರಿಪುರ : ಶಿವಮೊಗ್ಗ ಜಿಲ್ಲೆಯ ಡಿಸಿಸಿ ಬ್ಯಾಂಕ್ (DCC Bank) ನೇಮಕಾತಿ ಸಂದರ್ಭದಲ್ಲಿ ಹೊರಡಿಸಿರುವ ಅಧಿಸೂಚನೆ ಪಾಲಿಸದೆ ನಿಯಮ ಉಲ್ಲಂಘಿಸಿದ ಕಾರಣ ಇಡೀ ಪ್ರಕ್ರಿಯೆ ಕುರಿತು ಐದು ವಾರದಲ್ಲಿ ತನಿಖೆ ನಡೆಸಿ ಸರಕಾರಕ್ಕೆ ವರದಿ ನೀಡುವಂತೆ ಹೈಕೋರ್ಟ್ (High Court) ಆದೇಶಿಸಿದೆ.
ಡಿಸಿಸಿ ಬ್ಯಾಂಕ್ ಪರೀಕ್ಷೆ ಸಂದರ್ಭದಲ್ಲಿ ನಿಯಮ ಪಾಲಿಸದೆ ಉಲ್ಲಂಘಿಸಲಾಗಿದೆ ಪ್ರಶ್ನೆ ಪತ್ರಿಕೆ ವಾಪಸ್ ಪಡೆದಿರುವುದು, ಹಾಜರಾಗದ ಅಭ್ಯರ್ಥಿ ಒಎಂಆರ್ ಶೀಟ್ ಕಿತ್ತು ತೆಗೆದಿರುವುದು ಸೇರಿದಂತೆ ಹಲವು ಉಲ್ಲಂಘನೆ ಕುರಿತು ಶಿಕಾರಿಪುರ ತಾಲ್ಲೂಕಿನಿಂದ ಪರೀಕ್ಷೆಗೆ ಹಾಜರಾಗಿದ್ದವರು ಹೈಕೋರ್ಟ್ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು ಈ ಸಂಬಂಧಿಸಿದಂತೆ ಯಾರೂ ಯಾವುದೆ ಉತ್ತರ ನೀಡದೇ, ನೇಮಕಾತಿ ಮುಂದುವರೆಸಿದ್ದನ್ನು ಪ್ರಶ್ನಿಸಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಾದ ಡಿ.ಮಂಜುನಾಥ್, ಜಿ.ಕೆ.ಆಕಾಶ್ ಹೈಕೋರ್ಟ್ ಮೊರೆ ಹೋಗಿದ್ದರು. ಫೆ.16ರಂದು ವಿಚಾರಣೆ ನಡೆಸಿದ ಕೋರ್ಟ್ ಸಮಗ್ರ ತನಿಖೆಗೆ ಆದೇಶಿಸಿದೆ.
ನೇಮಕಾತಿ ಅಧಿಸೂಚನೆ ಉಲ್ಲಂಘನೆ ಸೇರಿ ಯಾವುದೆ ಬಗೆಯ ಆಕ್ಷೇಪಣೆ ಇದ್ದರೂ ಅದನ್ನು ಶಿವಮೊಗ್ಗ ಜಿಲ್ಲಾ ಉಪನಿಬಂಧಕರಿಗೆ ಲಿಖಿತ ಅರ್ಜಿ ಮೂಲಕ ಒಂದು ವಾರದೊಳಗೆ ಸಲ್ಲಿಸಬೇಕು. ಕೋರ್ಟ್ಗೆ ಅರ್ಜಿ ಸಲ್ಲಿಸಿದವರನ್ನು ಬಿಟ್ಟು ಬೇರೆ ಯಾರೆ ಇದ್ದರೂ ತಮ್ಮ ದೂರನ್ನು ನೀಡುವುದಕ್ಕೆ ಅವಕಾಶ ನೀಡಲಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಅರ್ಹರಿಗೆ ಸ್ಥಾನ ಸಿಗುವುದಕ್ಕೆ ನ್ಯಾಯಾಲಯ ಅವಕಾಶ ಕಲ್ಪಿಸಿದ್ದು ಅದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಡಿ.ಮಂಜುನಾಥ್, ಆಕಾಶ್ ಮನವಿ ಮಾಡಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಸೂಚನೆಯಲ್ಲಿ ತಿಳಿಸಿದಂತೆ ನಡೆದುಕೊಂಡಿಲ್ಲ ಅದನ್ನು ಪ್ರಶ್ನಿಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ಸಹಕಾರಿ ಉಪನಿಬಂಧಕರು, ಸದಸ್ಯ ಕಾರ್ಯದರ್ಶಿ ನೇಮಕಾತಿ ಸಮಿತಿ ಇವರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರೂ ಯಾವುದೆ ಪ್ರಯೋಜನ ಆಗಿರಲಿಲ್ಲ. ಸರಿ ಉತ್ತರ (ಕೀ ಆನ್ಸರ್)ಕ್ಕೆ ಆಕ್ಷೇಪಣೆ ಸಲ್ಲಿಸಿದ್ದರೂ ಅದಕ್ಕೂ ಯಾವುದೆ ಉತ್ತರ ನೀಡದೆ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದ್ದರು ಅದಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದಾಗಿ ಮಂಜುನಾಥ್, ಆಕಾಶ್ ಹೇಳಿದರು.
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…