ಸಾಗರ

ಹೃದಯಾಘಾತಕ್ಕೆ ಒಂದನೇ ತರಗತಿ ವಿದ್ಯಾರ್ಥಿ ಬಲಿ !

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 ವರ್ಷದ ತ್ರಿಲೋಕ್ ಜೈನ್ ಶನಿವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಶಾಲಾ ಆವರಣದಲ್ಲಿ ಮಧ್ಯಾಹ್ನ ಶಾಲೆಯ ಮುಕ್ತಾಯದ ಸಮಯದಲ್ಲಿ ತ್ರಿಲೋಕ್ ಏಕಾಏಕಿ ಕುಸಿದು ಬಿದ್ದಿದ್ದು, ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆ ಪ್ರಾಣಪಕ್ಷಿ ಹಾರಿಹೋಗಿದೆ. ಈತ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರ.

ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮುಖ್ಯ ಶಿಕ್ಷಕರು ಕಂಬನಿ ಮಿಡಿದಿದ್ದಾರೆ. ತ್ರಿಲೋಕ್ ನಿಧನದಿಂದ ಶಾಲೆ ಮತ್ತು ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]