ಮೀನುಮರಿ ಸಾಕಾಣಿಕೆಯಿಂದ ಆರ್ಥಿಕ ಸ್ವಾವಲಂಬನೆಗೆ ರಹದಾರಿ ; ಬೇಳೂರು ಗೋಪಾಲಕೃಷ್ಣ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಮಹಿಳೆಯರು, ಸ್ವಸಹಾಯ ಸಂಘದ ಮಹಿಳೆಯರು ತಮ್ಮೂರಿನ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡುವ ಮೂಲಕ ಅರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಹಕಾರಿಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬರುವೆ ಗ್ರಾಮದಲ್ಲಿನ ಗ್ರಾಮ ಪಂಚಾಯಿತ್ ಮಟ್ಟದ ಒಕ್ಕೂಟಗಳ ಹಾಗೂ ಸ್ವಸಹಾಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಮೂರು ಕೆರೆಗಳಿಗೆ ಮೀನು ಮರಿಗಳ ಬಿತ್ತನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಅಡುಗೆಗೆ ಸೀಮಿತವಾಗದೆ ಇತ್ತೀಚಿನ ದಿನಗಳಲ್ಲಿ ಯಾವುದೇ ಕ್ಷೇತ್ರಕ್ಕೂ ಸೈ ಎನ್ನಿಸಿಕೊಳ್ಳುವತ್ತ ಮುಂದಾಗಿದ್ದಾರೆ. ಒಕ್ಕೂಟದ ಮೂಲಕ ಮೀನು ಸಾಕಾಣಿಕೆಯಲ್ಲಿ ತೊಡಗಿರುವುದರೊಂದಿಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಮುಂದಾಗಿರುವುದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಇನ್ನೂ ಹೆಚ್ಚು ಇಂತಹ ಕಾರ್ಯದಲ್ಲಿ ಮುಂದಾಗಲು ಸಂಪೂರ್ಣ ಸಹಕಾರ ಕಲ್ಪಿಸುವುದಾಗಿ ಹೇಳಿ  ಹೇಳಿದರು.

ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ರಿನಾಸೈಜ್ ಗ್ರಾಮ ಪಂಚಾಯಿತ್ ಸದಸ್ಯರಾದ ನಿರೂಪ್ ಕುಮಾರ್, ಆಸಿಪ್ ಭಾಷಾ, ಗಣಪತಿ, ಅಶ್ವಿನಿ ರವಿಶಂಕರ್, ಪ್ರಕಾಶ ಪಾಲೇಕರ್, ಅನುಪಮ ರಾಕೇಶ್, ಪಿಡಿಒ ನಾಗರಾಜ್, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Leave a Comment