SHIVAMOGGA | ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸುವೆ ಅಭಿವೃದ್ಧಿಗೆ ಆದ್ಯತೆ ನೀಡುವೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ನೀಲಿನಕ್ಷೆ ತಯಾರಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ (B.Y. Raghavendra) ಹೇಳಿದರು.
ಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ !
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೀಗ ಲೋಕಸಭಾ ಅಧಿವೇಶನವನ್ನು ಪ್ರಮಾಣ ವಚನ ಸ್ವೀಕರಿಸಿ ಮುಗಿಸಿಕೊಂಡು ಬಂದಿದ್ದೇನೆ. ಮೊದಲ ಬಾರಿಯೇ ಜಿಲ್ಲೆಯ ಸಮಸ್ಯೆಗಳತ್ತ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ, ಗಮನಸೆಳೆದಿದ್ದೇನೆ. ಅಲ್ಲದೇ ಜಿಲ್ಲಾ ಮಟ್ಟದಲ್ಲೂ ಕೂಡ ಮುಖಂಡರು ಸೇರಿ ಕ್ಷೇತ್ರದಲ್ಲಿ ಉಳಿದಿರುವ ಸಮಸ್ಯೆಗಳ ಬಗ್ಗೆ ನೀಲಿನಕ್ಷೆಯನ್ನು ಕೂಡ ತಯಾರಿಸಿದ್ದೇವೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕಂಕಣ ಬದ್ದನಾಗಿದ್ದೇನೆ ಎಂದರು.
ಕೇಂದ್ರ ಸಚಿವರಲ್ಲಿ ಮನವಿ :
ರೈಲ್ವೆ, ಹೆದ್ದಾರಿ, ಪ್ರವಾಸೋಧ್ಯಮ, ಕೈಗಾರಿಕೆ, ಉದ್ಯೋಗ, ಶರಾವತಿ ಸಂತ್ರಸ್ಥರ ಸಮಸ್ಯೆ, ಬಗರ್ಹುಕುಂ ಸಾಗುವಳಿದಾರರ ಸಮಸ್ಯೆ, ಎಂಪಿಎಂ, ವಿಐಎಸ್ಎಲ್ ಸಮಸ್ಯೆ ಹೀಗೆ ಹಲವು ವಿಷಯಗಳಿವೆ. ಈ ಎಲ್ಲಾ ವಿಷಯಗಳ ಬಗ್ಗೆ ಈಗಾಗಲೇ ಇದಕ್ಕೆ ಸಂಬಂಧಪಟ್ಟ ಕೇಂದ್ರ ಸಚಿವರುಗಳ ಪ್ರಸ್ತಾಪ ಮಾಡಿದ್ದೇನೆ. ಮನವಿಕೂಡ ಮಾಡಿದ್ದೇನೆ. ರಾಜ್ಯ ಸರ್ಕಾರದ ನೆರವಿನೊಂದಿಗೆ ಈ ಎಲ್ಲಾ ಅಭಿವೃದ್ಧಿಗಳನ್ನು ಕೈಗೊಳ್ಳುತ್ತೇವೆ ಎಂದರು.

ಸಚಿವರ ಭರವಸೆ :
ಕೇಂದ್ರ ಸಚಿವರುಗಳಾದ ನಿತಿನ್ ಗಡ್ಕರಿ, ಅಶ್ವಿನ್ ವೈಷ್ಣವ್, ಭೂಪೇಂದ್ರ ಯಾದವ್, ರಾಜನಾಥ್ ಸಿಂಗ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಮತ್ತು ಇಲಾಖೆಯ ಮುಖ್ಯಸ್ಥರುಗಳನ್ನು ಭೇಟಿ ಮಾಡಿದ್ದೇನೆ. ಕ್ಷೇತ್ರಕ್ಕೆ ಅನುದಾನ ಪಡೆದು, ಕಾರ್ಯಪ್ರವೃತ್ತನಾಗಿದ್ದೇನೆ. ಸಚಿವರೆಲ್ಲರು ಭರವಸೆ ನೀಡಿದ್ದಾರೆ ಎಂದರು.
2623 ಕೋಟಿ ರೂ. ಅನುಮೋದನೆ :
ಈಗಾಗಲೇ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರು 2024-25ನೇ ಸಾಲಿಗೆ ರಾಜ್ಯಕ್ಕೆ ಒಟ್ಟು 8006 ಕೋಟಿ ರೂ.ಗಳನ್ನು ನೀಡಿದ್ದಾರೆ. ಅದರಲ್ಲಿ ಲೋಕಸಭಾ ವ್ಯಾಪ್ತಿಗೆ 2623 ಕೋಟಿ ಮೊತ್ತದ ಅನುಮೋದನೆ ನೀಡಲಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಬೈಂದೂರ್ನಿಂದ ರಾಣೆಬೆನ್ನೂರುವರೆಗೆ 900 ಕೋಟಿ ರೂ. ಆನಂದಪುರ – ಸಾಗರ ಜೇನಿಕಟ್ಟೆ ರಸ್ತೆಗೆ 400 ಕೋಟಿ, ಆಗುಂಬೆ ಘಾಟಿ ರಸ್ತೆಯನ್ನು ಅಗಲೀಕರಣಗೊಳಿಸಲು 403 ಕೋಟಿ ನೀಡಲಾಗಿದೆ ಎಂದರು.
ಸೇತುವೆಗಳ ನಿರ್ಮಾಣ :
ಕೇಂದ್ರ ಭೂ ಸಾರಿಗೆ ಮಂತ್ರಾಲಯದಿಂದ ಮಂಜೂರಾದ ಕಾಮಗಾರಿಗಳಾದ ತುಮಕೂರು – ಶಿವಮೊಗ್ಗ ರಸ್ತೆ, ಚಿತ್ರದುರ್ಗ – ಶಿವಮೊಗ್ಗ ರಸ್ತೆ, ಸಿಂಗದೂರು ಸೇತುವೆ ನಿರ್ಮಾಣ, ಸಾಗರ ಪಟ್ಟಣದ 4 ಪಥದ ರಸ್ತೆ, ಹೊಸನಗರದ ಬೆಕ್ಕೋಡಿ ಸೇತುವೆ, ಶಿವಮೊಗ್ಗ ಸಂದೇಶ ಮೋಟರ್ನಿಂದ ಅರಕೆರೆಯವರೆಗೂ 4 ಪಥದ ರಸ್ತೆ, ಶಿಕಾರಿಪುರ ಬೈಪಾಸ್ ರಸ್ತೆ, ಶಿವಮೊಗ್ಗ ಆನಂದಪುರ ರಸ್ತೆ, ಮುಂತಾದ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೆಯೇ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ ಆಗುಂಬೆ ಘಾಟಿ ರಸ್ತೆಗೆ ಸುರಂಗ ಮಾರ್ಗದ ರಸ್ತೆ ಮಾಡಲು ಕೂಡ ಯೋಜನೆ ಮಾಡಲಾಗಿದೆ. ಇದರ ಜೊತೆಗೆ ಅಗತ್ಯ ಇರುವ ಕಡೆ ಸೇತುವೆಗಳನ್ನು ನಿರ್ಮಿಸಲಾಗುವುದು ಎಂದರು.
ಒಂಟಿ ಮಹಿಳೆಯರೆ ಈ ಕಾಮುಕನ ಟಾರ್ಗೆಟ್, ಗ್ರಾಮಸ್ಥರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ !
ಹೊಸ ರೈಲ್ವೆ ಮಾರ್ಗಕ್ಕೆ ಚಿಂತನೆ :
ರೈಲ್ವೆಗೆ ಸಂಬಂಧಿಸಿದಂತೆ ತಾಳಗುಪ್ಪ ಶಿರಸಿ, ತಡಸ, ಹುಬ್ಬಳ್ಳಿ, ಮತ್ತು ಶಿವಮೊಗ್ಗ ಶೃಂಗೇರಿ, ಮಂಗಳೂರಿಗೆ ಹೊಸ ಮಾರ್ಗ ಮಾಡಲು ಚಿಂತನೆ ನಡೆದಿದೆ. ಶಿವಮೊಗ್ಗ-ಬೀರೂರು ನಡುವೆ ಡಬ್ಲಿಂಗ್ ಮಾರ್ಗ ನಿರ್ಮಿಸಲಾಗುವುದು. ಕೋಟೆ ಗಂಗೂರಿನಲ್ಲಿ ಎಕ್ಸ್ಲೈಟರ್ ನಿರ್ಮಾಣ ಮಾಡಲಾಗುವುದು ಎಂದರು.
ಹೊಸ ರೈಲು ಸಂಚಾರ :
ಬೆಂಗಳೂರು – ಚೆನೈ ನಡುವೆ ಹೊಸ ರೈಲು ಸಂಚಾರ ಈ ವಾರದಲ್ಲಿ ಆರಂಭವಾಗಲಿದೆ. ಸಂಜೆ 4ಕ್ಕೆ ಶಿವಮೊಗ್ಗದಿಂದ ಹೊರಟ ಈ ರೈಲು ಬೆಳಿಗ್ಗೆ 4.45ಕ್ಕೆ ಚೆನೈ ತಲುಪುತ್ತದೆ. ಅದೇ ದಿನ ರಾತ್ರಿ 11.30ಕ್ಕೆ ಚೈನೈನಿಂದ ಹೊರಟ ರೈಲು ಮಾರನೇ ದಿನ ಮಧ್ಯಾಹ್ನ 1ಕ್ಕೆ ಬಂದು ತಲುಪುತ್ತದೆ ಎಂದರು.
ಸಮಸ್ಯೆಗಳತ್ತ ಗಮನಹರಿಸಲಾಗುವುದು :
ಇದರ ಜೊತೆಗೆ ಶರಾವತಿ ಸಂತ್ರಸ್ಥರ ಸಮಸ್ಯೆ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಸಮಸ್ಯೆ ಬಗರ್ಹುಕುಂ ಸಾಗುವಳಿದಾರರ ಸಮಸ್ಯೆಗಳತ್ತ ಗಮನಹರಿಸಲಾಗುವುದು. ನಂಬಿಕೆ ಇದೆ ಈ ಎರಡು ಕಾರ್ಖಾನೆಗಳು ಪುನರಾರಂಭಿಸುತ್ತವೆ ಎಂದು ಈಗಾಗಲೇ ಎಂಪಿಎಂ ಕಾರ್ಖಾನೆಗೆ ಸಂಬಂಧಿಸಿದಂತೆ 20 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಕಾರ್ಖಾನೆಗೆ ಮತ್ತು 40 ವರ್ಷದ ಲೀಸ್ ಅವಧಿಗೆ ವಿಸ್ತರಿಸಲು ಮನವಿ ಮಾಡಿದ್ದೇವೆ, ಆದರೆ ಪರಿಸರ ಪ್ರೇಮಿಗಳು ಅಲ್ಲಿ ನೀಲಗಿರಿ ಬೆಳೆಯಬಾರದು ಎಂಬ ಹೋರಾಟ ನಡೆಸುತ್ತಿದ್ದಾರೆ. ನೀಲಗಿರಿ ಇಲ್ಲದೆ, ಕಾರ್ಖಾನೆ ಮಾಡುವುದು ಹೇಗೆ ಎಂಬ ಯೋಚನೆ ಬರುತ್ತದೆ. ವಿಐಎಸ್ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಕೈಗಾರಿಕಾ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿಯವರು ಕಾರ್ಖಾನೆಗೆ ಭೇಟಿ ನೀಡಿ, ಭರವಸೆ ನೀಡಿದ್ದಾರೆ. ಪುನಶ್ಚೇತನಗೊಳಿಸಲು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಗಾಗಲೇ ಸಭೆಗಳನ್ನು ಕೂಡ ನಡೆಸಲಾಗಿದೆ ಎಂದರು.
SSY | ಹೆಣ್ಣು ಮಕ್ಕಳ ಮದುವೆಗಾಗಿ ಹೂಡಿಕೆ ಮಾಡಬೇಕೆ ? ಇಲ್ಲಿದೆ ಸರ್ಕಾರದ ಅತ್ಯುನ್ನತ ಯೋಜನೆ !
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಪ್ರಮುಖರಾದ ರುದ್ರೇಗೌಡರು, ಮೋಹನ್ರೆಡ್ಡಿ, ಜಗದೀಶ್, ಸತೀಶ್, ಮಾಲತೇಶ್, ಚಂದ್ರಶೇಖರ್, ವಿನ್ಸಂಟ್, ಕುಪ್ಪೇಂದ್ರ, ಕೆ.ವಿ.ಅಣ್ಣಪ್ಪ, ರಾಮು ಇದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?