ಶಿವಮೊಗ್ಗ ಸುದ್ದಿ

ಮಲಗಿದ್ದಾಗಲೇ ಸಾವನ್ನಪ್ಪಿದ ಅರಣ್ಯ ರಕ್ಷಕ !

ತೀರ್ಥಹಳ್ಳಿ : ತಾಲ್ಲೂಕಿನಲ್ಲಿ ಅರಣ್ಯ ರಕ್ಷಕರಾಗಿ (Forest Guard) ಸೇವೆ ಸಲ್ಲಿಸುತ್ತಿದ್ದ ಬಸವರಾಜು (34) ಬೆಜ್ಜವಳ್ಳಿಯ (Bejjavalli) ತಮ್ಮ ವಾಸದ ಮನೆಯಲ್ಲಿ ಮಲಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

WhatsApp Group Join Now
Telegram Group Join Now
Instagram Group Join Now

ಬಸವರಾಜು ದಬ್ಬಣಗದ್ದೆ, ಮಹಿಷಿ, ಮಂಡಗದ್ದೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನವರಾದ ಬಸವರಾಜು, ಕಳೆದ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯನ್ನು ಅಗಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More

Adike Price 28 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

BSNL ನೆಟ್‌ವರ್ಕ್ ಸಮಸ್ಯೆ, ಟವರ್ ಏರಿ ಪ್ರತಿಭಟಿಸಿದ ಗ್ರಾಮಸ್ಥರು

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]