Hosanagara

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ ; ಚಂದ್ರಮೌಳಿ ಸಂತಾಪ

HOSANAGARA ; ಕರ್ನಾಟಕದ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಅಂದೇ ಜಾರಿಗೆ ತಂದು ಎಲ್ಲ ಶಾಲೆ ಮಕ್ಕಳು ಹಸಿವಿನಿಂದ ಇರಬಾರದು ಎಂದು ಬಿಸಿಯೊಟ ಜಾರಿಗೆ ತಂದವರು. ಡಾ|| ರಾಜ್‌ಕುಮಾರ್‌ರನ್ನು ವೀರಪ್ಪನ್ ಅಪಹರಿಸಿದ್ದಾಗ ಜನರು ದುಃಖದಲ್ಲಿರುವಾಗ ರಾಜ್ಯದ ಜನತೆಗೆ ಧೈರ್ಯ ತುಂಬಿ ಡಾ|| ರಾಜ್‌ಕುಮಾರ್‌ರವರನ್ನು ಕಷ್ಟದಿಂದ ಪಾರು ಮಾಡಿದವರು.

ಇವರು ಮುಖ್ಯಮಂತ್ರಿಯಾದ ಸಮಯದಲ್ಲಿ ಕರ್ನಾಟಕದ ಉತ್ತಮ ಆಳ್ವಿಕೆ ನಡೆಸಿ ಯಾವುದೇ ಪಕ್ಷ ಭೇದವಿಲ್ಲದೆ ಜನ ಸೇವೆ ಮಾಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದವರಾಗಿದ್ದು ಇವರ ನಿಧನದಿಂದ ಇಡೀ ರಾಜ್ಯ ಜನತೆ ದುಃಖಭರಿತರಾಗಿದ್ದಾರೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>