ಶಾಖವಳ್ಳಿಯ ಸುಮಾ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

Written by Mahesha Hindlemane

Published on:

ರಿಪ್ಪನ್‌ಪೇಟೆ : ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸುಮಾ (27) ಹೆರಿಗೆ ಸಂದರ್ಭದಲ್ಲಿ ಮಗು ಜನಿಸಿದ ನಂತರ ತೀವ್ರ ರಕ್ತಸ್ರಾವವಾಗಿ ಅಗತ್ಯ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದು ವಿಷಯ ತಿಳಿದು ಇಂದು ಮೃತ ಸುಮಾ ಮಹೇಶ್ ನಿವಾಸಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕ ಧನ ಸಹಾಯ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇದೇ ಸಂದರ್ಭದಲ್ಲಿ ಸಚಿವ ಯು‌.ಟಿ ಖಾದರ್ ಜೊತೆ ದೂರವಾಣಿ ಮೂಲಕ ಮಾತನಾಡಿ, ಖಾಸಗಿ ಆಸ್ಪತ್ರೆ ವೆಚ್ಚ ಸೇರಿದಂತೆ ಲಕ್ಷಾಂತರ ಹಣ ವ್ಯಯವಾಗಿದ್ದು, ಜನಿಸಿದ ಗಂಡು ಮಗು ಕೂಡಾ ತಾಯಿ ಇಲ್ಲದೇ ಅನಾಥವಾಗಿದೆ. ಕಡು ಬಡತನದ ಹಿಂದುಳಿದ ವರ್ಗದ ಕುಟುಂಬದ ಈ ಮಹಿಳೆಯ ಕುಟುಂಬಕ್ಕೆ ಮತ್ತು ಇನ್ನೂ ಚಿಕಿತ್ಸೆಯಲ್ಲಿ ಇರುವ ಮಗುವಿನ ನಿರ್ವಹಣೆಗೆ ಪರಿಹಾರವನ್ನು ಸರ್ಕಾರದಿಂದ ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಇದ್ದರು.

Leave a Comment