HOSANAGARA ; ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು.
ಅಲ್ಲದೆ, ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಕಿಮ್ಮನೆ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನನ್ನನ್ನು ಸೇರಿದಂತೆ ಇಡೀ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ ಹಾಗೂ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಿರಿ ಎಂಬುದಾಗಿ ಮಾಜಿ ಸಚಿವರು ನಾಗೋಡಿ ವಿಶ್ವನಾಥ್ ಅವರಿಗೆ ಧೈರ್ಯ ತುಂಬಿದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.