ಹೊಸನಗರ ; ಉಳುವವನೇ ಹೊಲದೊಡೆಯ ಕಾಗೋಡು ರೈತ ಚಳುವಳಿ ನೆಡೆದು 75 ವಸಂತಗಳು ಸಂದ ಹಿನ್ನೆಲೆಯಲ್ಲಿ ಅಂದಿನ ಚಳುವಳಿಯ ನೇತಾರ ದಿವಂಗತ ಡಾ.ಹೆಚ್. ಗಣಪತಿಯಪ್ಪ ಅವರ ಸ್ಮರಣಾರ್ಥ ಸಾಗರದ ಹೆಚ್. ಗಣಪತಿಯಪ್ಪ ಸೇವಾ ಟ್ರಸ್ಟ್ (ರಿ) ಕಳೆದ ಆರು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮಹನೀಯರಿಗೆ ನಿರಂತರವಾಗಿ ನೀಡುತ್ತ ಬಂದಿರುವ ‘ಡಾ. ಹೆಚ್. ಗಣಪತಿಯಪ್ಪ ನೇಗಲ ಯೋಗಿ’ 2026ನೇ ಸಾಲಿನ ರಾಜ್ಯ ಮಟ್ಟದ ‘ಡಾ. ಹೆಚ್. ಗಣಪತಿಯಪ್ಪ ನೇಗಿಲ ಯೋಗಿ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸೊನಲೆ ಗ್ರಾಮ ವಾಸಿ 95 ವಯೋಮಾನದ ರಾಜ್ಯದ ಹಿರಿಯ ರಾಜಕೀಯ ಮುತ್ಸದಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಆಯ್ಕೆಯಾಗಿದ್ದಾರೆ.
ಶೀಘ್ರದಲ್ಲೇ ಸಾಗರ ಪಟ್ಟಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ಟ್ರಸ್ಟ್ ಹಸ್ತಾಂತರ ಮಾಡಲಿದೆ ಎಂದು ಟ್ರಸ್ಟ್ನ ಮೂಲಗಳು ತಿಳಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





