ಹೊಸನಗರ

ನಿಟ್ಟೂರು ಶ್ರೀಗಳ ಮಧ್ಯಸ್ಥಿಕೆ ; ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಮಾಜಿ ಶಾಸಕ ಬಿ.ಸ್ವಾಮಿರಾವ್

ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ 95ರ ಇಳಿ ವಯಸ್ಸಿನ ಮಾಜಿ ಶಾಸಕ ಸಂಘದ ಕಚೇರಿ ಎದುರು ಕೈಗೊಂಡಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ನಿಟ್ಟೂರು ಶ್ರೀ ನಾರಾಯಣ ಗುರು ಮಠದ ಪೀಠಾಧ್ಯಕ್ಷ ಶ್ರೀ ರೇಣುಕಾನಂದ ಸ್ವಾಮಿಗಳು ಮಧ್ಯಸ್ಥಿಕೆಯಲ್ಲಿ ಹಲವು ಷರತ್ತುಗಳಿಗೆ ಒಪ್ಪಿ ಗುರುವಾರ ಮಧ್ಯಾಹ್ನ ಎಳನೀರು ಸೇವಿಸುವ ಮೂಲಕ ಅಂತ್ಯಗೊಳಿಸಿದರು.

WhatsApp Group Join Now
Telegram Group Join Now
Instagram Group Join Now

ವಿಷಯ ತಿಳಿದು ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜೆಡಿಎಸ್ ಮುಖಂಡ ಚಾಬುಸಾಬ್, ಸಮಾಜವಾದಿ ಮುಖಂಡ ಕಲ್ಲೂರು ಮೇಘರಾಜ್, ಪ್ರಮುಖರಾದ ಟಿ.ಡಿ.ಮೇಘರಾಜ್, ಪ್ರಶಾಂತ್ ಕೆ.ಜಿ. ಶಿವಪ್ಪ, ಉಮೇಶ್ ಕಂಚುಗಾರ್, ದೀವರ ಯುವ ವೇದಿಕೆ ಸದಸ್ಯರು, ದೀವರ ಹಿತರಕ್ಷಣಾ ವೇದಿಕೆ ಸದಸ್ಯರು ಸೇರಿದಂತೆ ಅನೇಕರು ಉಪವಾಸ ನಿರತ ಸ್ವಾಮಿರಾವ್ ಅವರನ್ನು ಸಂತೈಸಲು ಯತ್ನಿಸಿದರು. ಪಟ್ಟು ಬಿಡದ ಸ್ವಾಮಿರಾವ್, ಸಂಘದ‌ ಆಡಳಿತ ಮಂಡಳಿಯ ಸಾಮೂಹಿಕ ರಾಜೀನಾಮೆ ಹಾಗೂ ಲೆಕ್ಕಪತ್ರ ಸಲ್ಲಿಕೆಗೆ ಒತ್ತಾಯ ನಿರಂತರವಾಗಿತ್ತು. ಶ್ರೀಗಳ ಮಧ್ಯ ಪ್ರವೇಶದಿಂದ ಪ್ರತಿಭಟನೆ ಸುಖಾಂತ್ಯ ಕಂಡಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]