RIPPONPETE ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ 17 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು.
ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು, ರಿಪ್ಪನ್ಪೇಟೆ, ಅರಸಾಳು, ಶಿವಮೊಗ್ಗ ಹೋಗಿಬರಲು ಈ ಹಳ್ಳ ದಾಟಿ ಬರಬೇಕಾದ ಅನಿರ್ವಾತೆ ಇದ್ದು ಬಹು ವರ್ಷದ ಬೇಡಿಕೆಯಂತೆ ನಾನು ಶಾಸಕನಾದ ಮೇಲೆ ಸರ್ಕಾರದಿಂದ 17 ಲಕ್ಷ ರೂ. ವೆಚ್ಚದಲ್ಲಿ ಕಾಲುಸಂಕ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಿ ಆ ಕಾಮಗಾರಿ ಸುಸಜ್ಜಿತವಾಗಿ ಶೀಘ್ರದಲ್ಲಿ ಪೂರ್ಣಗೊಳಿಸಿ ಓಡಾಡಕ್ಕೆ ಅನುಕೂಲ ಕಲ್ಪಿಸುವಂತೆ ಗುತ್ತಿಗೆದಾರನಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್, ಎಪಿಎಂ.ಸಿ.ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಬೆಳ್ಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಂ.ಯೋಗೀಶ್, ಅವಡೆ ಶಿವಪ್ಪ, ಶ್ರೀಧರ, ಡಿ.ಈ.ಮಧುಸೂಧನ್, ಸಣ್ಣಕ್ಕಿ ಮಂಜು, ಉಂಡುಗೋಡು ನಾಗಪ್ಪ, ಕಟ್ಟೆನಾಗಪ್ಪ, ಆಸಿಫ್, ರವೀಂದ್ರ ಕೆರೆಹಳ್ಳಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಅಕ್ರಮ ಮದ್ಯ ಮಾರಾಟ ವಿರೋಧಿಸಿ ಶಾಸಕರಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ ಮನವಿ ಸಲ್ಲಿಕೆ
RIPPONPETE ; ಬೆಳ್ಳೂರು, ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದನ್ನು ತಕ್ಷಣ ತಡೆಹಿಡಿಯುವ ಮೂಲಕ ಗ್ರಾಮದಲ್ಲಿ ಮದ್ಯ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಹಾರೋಹಿತ್ತಲು, ಮತ್ತಲಿಜಡ್ಡು, ಗುಬ್ಬಿಗಾ, ಗುಳಿಗುಳಿಶಂಕರ ಸ್ವಸಹಾಯ ಸಂಘದ ಮಹಿಳೆಯವರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಮನವಿ ಮೂಲಕ ಆಗ್ರಹಿಸಿದರು.
ಮಹಿಳೆಯರ ಮನವಿ ಸ್ವೀಕರಿಸಿ ತಕ್ಷಣ ಸ್ಥಳದಲ್ಲಿದ್ದ ಪಿಎಸ್ಐ ಪ್ರವೀಣ್ ಎಸ್.ಪಿ.ಯವರಿಗೆ ಇಂದಿನಿಂದಲೇ ಯಾವ-ಯಾವ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬುದನ್ನು ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪತ್ತೆ ಮಾಡಿ ಕ್ರಮ ಕೈಗೊಳ್ಳುವುದರೊಂದಿಗೆ ಮದ್ಯ ಮಾರಾಟವನ್ನು ತಡೆಹಿಡಿಯಲು ಶಾಸಕರು ಸೂಚಿಸಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?