ಹೊಸನಗರ ; ಸಂಕ್ರಾಂತಿ ಹಬ್ಬದ ದಿನದಂದು ತಾಲ್ಲೂಕಿನ ಮೂಲೆಗದ್ದೆಯ ಶ್ರೀ ಸದಾನಂದ ಶಿವಯೋಗಾಶ್ರದಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ದಾಸೋಹ ಭವನ ಕಟ್ಟಡದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಆನಂದಪುರ ಮುರುಘಾಮಠದ ಮುರುಘಾ ರಾಜೇಂದ್ರ ಮಹಾಸ್ವಾಮಿಗಳು, ಮಾಜಿ ಶಾಸಕ ಬಿ.ಸ್ವಾಮಿರಾವ್, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ, ಸಾಗರದ ಕೆ.ಎಸ್. ಪ್ರಶಾಂತ್ ಶಿವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

