CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.
School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

ಅದರಂತೆ ಚಿಕ್ಕಮಗಳೂರು (ಅಂಬಳೆ, ಲಕ್ಯಾ ಹೋಬಳಿ ಹೊರತುಪಡಿಸಿ), ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ತಾಲೂಕು ವ್ಯಾಪ್ತಿಯ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ (ಜು.18) ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

