BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ.
ಕಲ್ಲಿಹಾಳ್ ಗ್ರಾಮದ ಸಹನಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಟಿವಿ ರಿಮೋಟ್ಗಾಗಿ ಇಬ್ಬರು ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಸಹನಾ ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

