ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಮೌಲ್ಯದ ನಾಗ-ನಾಣ್ಯ ಕಳವು

Written by Mahesha Hindlemane

Published on:

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ಹಾಗೂ ನಗದು ಅಪಹರಿಸಿರುವ ಘಟನೆ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗೌರಿಕೆರೆ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದು, ಅವರ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಂದರ್ಭವನ್ನು ಬಳಸಿಕೊಂಡ ಕಳ್ಳರು ಮನೆಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ವೈರ್‌ಗಳನ್ನು ಕತ್ತರಿಸಿ, ಮನೆಯ ಮುಂಬಾಗಿಲು ಮುರಿದು ನುಗ್ಗಿದ್ದಾರೆ. ಮನೆಯಲ್ಲಿಟ್ಟಿದ್ದ ಸುಮಾರು 10.80 ಲಕ್ಷ ರೂ. ಚಿನ್ನಾಭರಣ ಹಾಗೂ 2 ಲಕ್ಷ ರೂ. ಬೆಳೆಬಾಳುವ ಬೆಳ್ಳಿಯ ವಸ್ತುಗಳು ಮತ್ತು ಅಲ್ಮೆರಾದಲ್ಲಿಟ್ಟಿದ್ದ 1.75 ಲಕ್ಷ ರೂ. ನಗದು ಸೇರಿದಂತೆ 14.55 ಲಕ್ಷ ರೂ. ಮೌಲ್ಯದ ನಗ-ನಾಣ್ಯ ಕಳವು ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಮನೆಯ ಮುಂದಿದ್ದ ತಮ್ಮ ಟಿಪ್ಪರ್ ವಾಹನದ ಚಾಲಕ ಮನೆಯ ಮುಂಬಾಗಿಲು ಒಡೆದಿರುವುದನ್ನು ಗಮನಿಸಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಕಳ್ಳರ ಬೇಟೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Comment