ಸಾಗರ

ಸಾಗರ : ಅರಣ್ಯ ಭೂಮಿ ವಿವಾದ- ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸಾಗರ :ತಾಲ್ಲೂಕಿನ ಬಳಸಗೋಡ ಪ್ರದೇಶದಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ಈ ಕ್ರಮ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿ ಪ್ರತಿಭಟನೆಗೂ ಕಾರಣವಾಗಿತ್ತು. ಈ ಹಿನ್ನೆಲೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅರಣ್ಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ಅರಣ್ಯಾಧಿಕಾರಿಗಳ ಸಭೆಯಲ್ಲಿ ಶಾಸಕ ಬೇಳೂರು ಅವರು, “ನನ್ನ ಗಮನಕ್ಕೆ ಬಾರದೇ ಜನರಿಗೆ ನೋಟಿಸ್ ನೀಡುವುದು ಸರಿಯಲ್ಲ” ಎಂದು ಅಧಿಕಾರಿಗಳನ್ನು ಖಡಕ್ ಎಚ್ಚರಿಸಿದರು. ಮುಂದಿನ ದಿನಗಳಲ್ಲಿ ಯಾವುದೇ ಸಂದರ್ಭದಲ್ಲೂ ಜನರ ವಿರುದ್ಧ ನೋಟಿಸ್ ಹೊರಡಿಸುವ ಮೊದಲು ತಮಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಬಳಸಗೋಡ ಪ್ರದೇಶದಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿ ನಿರ್ಮಾಣದ ಯೋಜನೆ ಇದೆ. ಇದಕ್ಕಾಗಿ 100 ಎಕರೆ ಭೂಮಿ ಅಗತ್ಯವಿದ್ದು, ಪ್ರಸ್ತುತ ಅಲ್ಲಿ ಕೇವಲ 80 ಎಕರೆ ಮಾತ್ರ ಲಭ್ಯವಿದೆ ಎಂದು ಅವರು ತಿಳಿಸಿದರು. “ಭೂಮಿ ಸಂಬಂಧ ಯಾವುದೇ ಗೊಂದಲಗಳು, ಒತ್ತುವರಿ ಪ್ರಕರಣಗಳು ನಡೆಯದಂತೆ ಇಲಾಖೆ ತಕ್ಷಣ ಕ್ರಮವಹಿಸಬೇಕು” ಎಂದು ಸೂಚಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬೆಳ್ಳಂದೂರು ಅರಣ್ಯ ಭೂಮಿ ವಿಚಾರವನ್ನೂ ಅವರು ಸಭೆಯಲ್ಲಿ ಚರ್ಚಿಸಿದರು. “ಕಾನೂನು ಪ್ರಕಾರ ಗೇಣಿದಾರರಿಗೆ ಮೂರು ಎಕರೆ ಭೂಮಿಯನ್ನು ಬಗರ್ ಹುಕುಂ ಅಡಿಯಲ್ಲಿ ನೀಡಬಹುದು. ಈ ಹಂಚಿಕೆ ಪ್ರಕ್ರಿಯೆ ಸಂಪೂರ್ಣ ಕಾನೂನುಬದ್ಧವಾಗಿರಬೇಕು. ಆದರೆ ಸಾಗರ ತಾಲ್ಲೂಕಿನಲ್ಲೇ ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಆಗದಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು” ಎಂದು ಬೇಳೂರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸಾಗರ ಡಿಎಫ್ಓ ಮೋಹನ್ ಕುಮಾರ್, ಎಸಿಎಫ್ ರವಿ ಕೆ., ರವೀಂದ್ರ ನಾಯಕ್, ವೈಲ್ಡ್ ಲೈಫ್ ಕಾರ್ಗಲ್ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಸಿಂಧು, ಸಾಗರ ಆರ್‌ಎಫ್‌ಓ ಅಣ್ಣಪ್ಪ, ಕೂಗಾರು ಆರ್‌ಎಫ್‌ಓ ಮಹೇಶ್, ಅಂಬಾರಗೋಡ್ಲು ಆರ್‌ಎಫ್‌ಓ ಶಾಂತಪ್ಪ ಪೂಜಾರ್, ಹೊಸನಗರ ಆರ್‌ಎಫ್‌ಓ ಅನಿಲ್ ಕುಮಾರ್, ಕಾರ್ಗಲ್ ಆರ್‌ಎಫ್‌ಓ ರಾಘವೇಂದ್ರ ಅಗಸೆ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದ

ಪೌರ ಕಾರ್ಮಿಕರು, ರೈತರು, ಸೈನಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650