ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಸರ್ಕಾರಿ ಬಸ್ !

Written by Mahesha Hindlemane

Published on:

ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೇ, ಮನೆಯ ಛಾವಣಿಗೆ ಹಾನಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಂಗಳೂರಿನಿಂದ ಶೃಂಗೇರಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಜಲದುರ್ಗ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಕೆಳಭಾಗದಲ್ಲಿನ ಮನೆಯ ಮೇಲೆ ಉರುಳಿ ಬಿದ್ದಿದೆ.

ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಇದ್ದು 20 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಮಾಹಿತಿ ಪಡೆದರು.

ಈ ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment