Hosanagara

ಅತಿವೃಷ್ಠಿಯಿಂದ ಹಾನಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧ ; ಕಲಗೋಡು ರತ್ನಾಕರ

HOSANAGARA | ಅತಿವೃಷ್ಠಿಯಿಂದ ಆಗಿರುವ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟದ ಕುರಿತು ಅಧಿಕಾರಿವರ್ಗ ವರದಿ ಸಲ್ಲಿಸಲಿದ್ದು, ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹಾನಿಗೊಳಗಾದ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಅವರು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಲೆನಾಡು ಭಾಗದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಈ ಕಾರಣದಿಂದ ಅಲ್ಲಲ್ಲಿ ಹಾನಿಯಾಗಿದೆ. ಕೃಷಿಕರು ಹಾಗೂ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಹೆಚ್ಚು ಸಂಕಷ್ಟ ಉಂಟಾಗಿದೆ. ಈವರೆಗೆ ತಾಲೂಕಿನಲ್ಲಿ ಮಳೆಯಿಂದ 58 ಮನೆಗಳಿಗೆ ಹಾನಿಯಾಗಿದೆ. ಅಪಾರ ಪ್ರಮಾಣದಲ್ಲಿ ಗ್ರಾಮೀಣ ರಸ್ತೆಗೆ ಧಕ್ಕೆಯಾಗಿದೆ. ಹಾನಿಯ ವಿಸ್ತೃತ ವರದಿಯನ್ನು ಅಧಿಕಾರಿ ವರ್ಗ ತಯಾರಿಸುತ್ತಿದ್ದು, ಸರ್ಕಾರ ಸಂತ್ರಸ್ಥರ ನೆರವಿಗೆ ನಿಂತಿದೆ. ಶಾಸಕರು ವಿದೇಶದಿಂದ ಮರಳಿದ ಬಳಿಕ ಅಗತ್ಯ ಕಾರ್ಯಗಳಿಗೆ ಇನ್ನಷ್ಟು ಚುರುಕು ದೊರೆಯಲಿದೆ ಎಂದರು.

ಹೊಸನಗರ ಪಟ್ಟಣಕ್ಕೆ 110 ಕೆವಿ ವಿದ್ಯುತ್ ಸ್ಥಾವರ ಇಲ್ಲದಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಸ್ಥಾವರ ನಿರ್ಮಾಣಗೊಂಡಲ್ಲಿ ಮುಂದಿನ 25 ವರ್ಷಗಳಿಗೆ ವಿದ್ಯುತ್ ಸಮಸ್ಯೆ ನೀಗಲಿದೆ. ತ್ವರಿತಗತಿಯಲ್ಲಿ ವರದಿ ಸಲ್ಲಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ವತಃ ಇಂಧನ ಮಂತ್ರಿಯವರಿಗೂ ನಾನು ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದರು.

ಮುಳುಗಡೆ ಸಂತ್ರಸ್ಥರ ಸಮಸ್ಯೆ ಕುರಿತು ಅರಣ್ಯ ಸಚಿವರ ಜೊತೆ ಇತ್ತೀಚೆಗೆ ನಡೆಸಿದ ಚರ್ಚೆ ಆಶಾದಾಯಕವಾಗಿದೆ. ಪರಿಹಾರ ಭೂಮಿ ನಿಗದಿಯಾಗಿದ್ದ ಭೂಮಿಯ ಡಿನೋಟಿಫಿಕೇಶನ್ ಪ್ರಕ್ರಿಯೆಗೆ ಪೂರಕ ದಾಖಲೆಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲು ಸರ್ಕಾರ ಸಜ್ಜಾಗಿದೆ. ಅರಣ್ಯ ಹಕ್ಕು ಕಾಯಿದೆಯಡಿ ಹಕ್ಕು ಪತ್ರ ಪಡೆಯಲು 75 ವರ್ಷಗಳ ಬದಲಿಗೆ 25 ವರ್ಷಗಳ ವಾಸ ದೃಢೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಪ್ರದಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಕೆ.ಎಸ್.ಗುರುರಾಜ್, ಹಿರಿಯರಾದ ಬಿ.ಆರ್.ಪ್ರಭಾಕರ, ಕಳೂರು ಕೃಷ್ಣಮೂರ್ತಿ, ಶ್ರೀನಿವಾಸ್ ಕಾಮತ್, ರಾಜಮೂರ್ತಿ, ನರ‍್ಲೆ ಸ್ವಾಮಿ, ನಿತ್ಯಾನಂದ, ಪಟ್ಟಣ ಪಂಚಾಯತಿ ಸದಸ್ಯೆ ನೇತ್ರ ಸುಬ್ರಾಯಭಟ್, ಹೆಚ್.ಎಂ. ನಿತ್ಯಾನಂದ, ಎಂ.ಪಿ. ಸುರೇಶ, ನಸೀರ್, ಇಕ್ಬಾಲ್, ಜಯನಗರ ಗುರು, ಉಬೇದ್ ಮತ್ತಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>