Hosanagara

ಕಾಂಪೌಂಡ್ ತೆರವು, ಗ್ರಾಪಂ ಆಸ್ತಿ ಕಬಳಿಕೆಗೆ ಅವಕಾಶ ಕೊಡಲ್ಲ ; ಶ್ರೀನಿವಾಸ್ ರೆಡ್ಡಿ

HOSANAGARA ; ಗ್ರಾಮ ಪಂಚಾಯತಿಗೆ ಸಂಬಂಧಿಸಿದ ನಿವೇಶನ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಣ ಮಾಡಿಕೊಂಡು ಸುತ್ತ ಕಾಂಪೌಂಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾಮ ಪಂಚಾಯಿತಿ ಅಕ್ರಮ ಕಾಂಪೌಂಡ್ ಅನ್ನು ತೆರವುಗೊಳಿಸಿ ಕ್ರಮ ಕೈಗೊಂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣ ಸಮೀಪದ ಸರ್ಕಲ್ ಬಳಿ ಖಾಲಿ ಉಳಿದಿದ್ದ ನಿವೇಶನ ಜಾಗವನ್ನು ಪಕ್ಕದ ನಿವಾಸಿಯೊಬ್ಬರು ತಮಗೆ ಸೇರಿದ ಜಾಗವೆಂದು ಕಾಂಪೌಂಡ್ ನಿರ್ಮಿಸಿದ್ದರು. ಗ್ರಾಮ ಪಂಚಾಯಿತಿ ಜಾಗವು ಅಕ್ರಮವಾಗಿ ಕಬಳಿಕೆ ಆದ ಪ್ರಕರಣವನ್ನು ವಿಶೇಷವಾಗಿ ಗಮನಿಸಿದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಮತ್ತು ಸದಸ್ಯರು ಮಂಗಳವಾರ ಸ್ಥಳಕ್ಕೆ ಆಗಮಿಸಿ ಕಾಂಪೌಂಡ್ ಕಟ್ಟಡ ತೆರವು ಕಾರ್ಯಾಚರಣೆ ನಡೆಸಿದರು.
ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಕೈಜೋಡಿಸಿದ್ದರು.

ಗ್ರಾಮ ಪಂಚಾಯಿತಿ ವಾದ :

ಈ ನಿವೇಶನ ಜಾಗವು ಲಾಗಾಯ್ತಿನಿಂದ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದೆ. ಅಗತ್ಯ ದಾಖಲೆ ಪತ್ರಗಳು ಇವೆ. ಇಲ್ಲಿ ಹಲವು ವರ್ಷಗಳಿಂದ ಅಂಗಡಿ ಮುಗ್ಗಟ್ಟು ತೆರೆಯಲಾಗಿತ್ತು. ಕೆಲ ತಿಂಗಳ ಹಿಂದೆ ಹೆದ್ದಾರಿ ಅಗಲೀಕರಣ ಸಮಯದಲ್ಲಿ ರಸ್ತೆ ವಿಸ್ತರಣೆ ಮಾಡಲಾಗಿದೆ. ನಿವೇಶನ ಜಾಗವು ಖಾಲಿ ಉಳಿದಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ನಂತರ ದಿನದಲ್ಲಿ ಸ್ಥಳೀಯ ನಿವಾಸಿಯೊಬ್ಬರು ಜಾಗದ ವಿಚಾರದಲ್ಲಿ ತಗಾದೆ ತೆಗೆದಿದ್ದಾರೆ. ಅಷ್ಟೇ ಅಲ್ಲದೆ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿ ಅಧಿಕಾರಿಗಳಿಂದಲೂ ಪ್ರಭಾವ ಬೀರಿದ್ದಾರೆ. ಈ ವಿಚಾರದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಛೀಮಾರಿ ಹಾಕಿದ್ದರು. ಈ ನಡುವೆ ಪ್ರಕರಣ ವಿವಾದಕ್ಕೆ ತಿರುಗಿ ರಾಜಕೀಯ ಮೇಲಾಟ ನಡೆದಿತ್ತು. ಶಾಸಕ ಆರಗ ಜ್ಞಾನೇಂದ್ರ ಅವರು ಸಾರ್ವಜನಿಕ ಆಸ್ತಿ ರಕ್ಷಣೆ ಕುರಿತಂತೆ ತಹಸೀಲ್ದಾರ್ ಅವರಿಗೆ ತಾಕೀತು ಮಾಡಿದ್ದರು. ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾಗದಂತೆ ಗಲಾಟೆಗೆ ಕಾರಣವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು.

ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದರು.
ಇಂದು ಬೆಳಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಒಟ್ಟಾಗಿ ಬಂದು ಕಾಂಪೌಂಡ್ ತೆರವು ಕಾರ್ಯಾಚರಣೆ ಮಾಡಿದ್ದಾರೆ.

ನಮ್ಮ ಹೊಣೆ :

ಗ್ರಾಮ ಪಂಚಾಯಿತಿ ಆಸ್ತಿ ರಕ್ಷಣೆ ನಮ್ಮ ಹೊಣೆಯಾಗಿದೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮೊದಲ ಆಧ್ಯತೆ ಆಗಿದೆ. ತೆರವು ಮಾಡಿದ ಜಾಗದಲ್ಲಿ ಕಟ್ಟಡ ಕಟ್ಟಲಾಗುವುದು. ಅಲ್ಲದೇ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಮುಲಾಜು ಇಲ್ಲದೆ ಕ್ರಮ ಜರುಗಿಸಲಾಗುವುದು. ಅಕ್ರಮ ಕಾಂಪೌಂಡ್ ತೆರವು ಕಾರ್ಯಾಚರಣೆಯಲ್ಲಿ ನಾಗರಿಕರ ಪಾತ್ರವೂ ಮುಖ್ಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>