SAGARA ; ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ಅನ್ನು ರಕ್ಷಿಸಿ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಇವರು ಗಡಿಕಟ್ಟೆಯಲ್ಲಿ ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ದಾಳಿಯಲ್ಲಿ ಪಿಎಸ್ಐ ವಿನಾಯಕ್ ಕೆ . ಹಾಗೂ ಸಿಬ್ಬಂದಿಗಳಾದ ಗಣೇಶ್, ವಿಶ್ವನಾಥ್, ಚಂದ್ರಕಾಂತ್, ಆಂಜನೇಯ ಪಾಟೀಲ್, ಮಹೇಶ್, ದಿನೇಶ್, ಪ್ರಮೋದಕುಮಾರಿ ಪಾಲ್ಗೊಂಡಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.